Advertisement
ಸುದ್ದಿಗಳು

ಸುಳ್ಯ ಗೃಹರಕ್ಷಕದಳ ಘಟಕ ಕ್ರಿಯಾಶೀಲ – ಡಾ|ಮುರಲೀ ಮೋಹನ್ ಚೂಂತಾರು

Share

ಸುಳ್ಯ: ಜಿಲ್ಲೆಯಲ್ಲಿ ಸುಳ್ಯ ಗೃಹರಕ್ಷಕದಳದ ಘಟಕ ಅತ್ಯಂತ ಕ್ರಿಯಾಶೀಲ ಘಟಕ ಹಾಗೂ ಪ್ರಸ್ತುತ ವರ್ಷಗಳಲ್ಲಿ ಪ್ರಾಕೃತಿಕ ವಿಕೋಪ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ರಕ್ಷಿಸುವ ಮೂಲಕ ಜಿಲ್ಲಾ ಗೃಹರಕ್ಷಕ ಇಲಾಖೆ ಉತ್ತಮ ಕಾರ್ಯ ನಿರ್ವಹಿಸಿದೆ ಎಂದು ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ|ಮುರಲೀ ಮೋಹನ್ ಚೂಂತಾರು ಹೇಳಿದರು.

ಅವರು  ಸುಳ್ಯ ಜೂನಿಯರ್ ಕಾಲೇಜು ಬಳಿ ಇರುವ ಸುಳ್ಯ ಗೃಹರಕ್ಷಕದಳ ಹಾಗೂ ಪೌರರಕ್ಷಣಾದಳ ಕಚೇರಿಗೆ ಭೇಟಿ  ನೀಡಿದ ಬಳಿಕ ಮಾತನಾಡಿದರು. ಇದೇ ಸಂದರ್ಭ  ಘಟಕದ ಕಚೇರಿಯಲ್ಲಿ ಪ್ರತಿ ಗೃಹರಕ್ಷಕರ ಅಹವಾಲು ಸ್ವೀಕರಿಸಿದರು.

ಘಟಕದ ವತಿಯಿಂದ ವನಮಹೋತ್ಸವ: ಸುಳ್ಯ ಘಟಕದ ಕಚೇರಿ ಆವರಣದಲ್ಲಿ ವನಮಹೋತ್ಸವ ನಡೆಯಿತು. ಈ ವೇಳೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸುಳ್ಯ ಲಯನ್ಸ್ ಕ್ಲಬ್ ನ ಮಾಜಿ ಗವರ್ನರ್ ಲಯನ್ಸ್ ಎಂ.ಬಿ.ಸದಾಶಿವ ಮಾತನಾಡಿ ಪ್ರಸ್ತುತ ವರ್ಷಗಳಲ್ಲಿ ಸುಳ್ಯ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪ ಸಮಯದಲ್ಲಿ ಪರಿಣಾಮಕಾರಿ ಕರ್ತವ್ಯ ನಿರ್ವಹಿಸಿದ ಗೃಹರಕ್ಷಕರನ್ನು ಅಭಿನಂದಿಸಿದರು ಹಾಗೂ ತುರ್ತು ಸಂಧರ್ಭದಲ್ಲಿ ತಮ್ಮ ಪ್ರಾಣದ ಹಂಗನ್ನೂ ತೊರೆದು ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಮಾಡಿದ ಗೃಹರಕ್ಷಕದಳದ ಕಾರ್ಯ ಶ್ಲಾಘನೀಯ ಗೃಹರಕ್ಷಕರು ಸಮಾಜದ ಆಸ್ತಿ ಎಂದು ನುಡಿದರು.

ಸುಳ್ಯ ಅರಣ್ಯ ಅಭಿವೃದ್ಧಿ ನಿಗಮದ ಮೆನೇಜರ್ ಲಯನ್ಸ್ ರಂಗನಾಥ್ ಮಾತನಾಡಿ ಮನಷ್ಯನ ಸ್ವಾರ್ಥಕ್ಕಾಗಿ ಪರಿಸರ ನಾಶವಾಗುತ್ತಿದೆ ಪರಿಸರದ ಅಸೋಮತೋಲನದಿಂದ ನಮಗೆ ತೊಂದರೆ ನಮಗಾಗಿ ಪರಿಸರ ರಕ್ಷಣೆ ಅನಿವಾರ್ಯ ಗೃಹರಕ್ಷಕದಳದ ವನಮಹೋತ್ಸವದಂತಹ ಕಾರ್ಯಕ್ರಮ ಶ್ಲಾಘನೀಯ ಎಂದರು.

ಕಮಾಂಡೆಂಟ್ ಅವರಿಗೆ ಸುಳ್ಯ ಘಟಕದಿಂದ ಸನ್ಮಾನ: ಇದೆ ಸಂಧರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಡಾ|ಮುರಲೀ ಮೋಹನ್ ಚೂಂತಾರು ಅವರು  ಬರೆದ ಸಂಜೀವಿನಿ ಎಂಬ ಪುಸ್ತಕ ಕ್ಕೆ ರಾಜ್ಯ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಅವರನ್ನು ಘಟಕದ ವತಿಯಿಂದ ಸುಳ್ಯ ಲಯನ್ಸ್ ಅಧಕ್ಷರಾದ ಗಂಗಾಧರ ರೈ ಹಾಗೂ ಎಂ.ಬಿ.ಸದಾಶಿವ ರವರು ಸನ್ಮಾನಿಸಿದರು.

ಈ ವೇಳೆಗೆ ಸುಳ್ಯ ಘಟಕಾಧಿಕಾರಿ ಜಯಂತ್ ಶೆಟ್ಟಿ , ಸುಳ್ಯ ಘಟಕದ ಸಾರ್ಜೆಂಟ್ ಅಬ್ದುಲ್ ಗಫೋರ್, ರಾಜೇಶ್.ಬಿ ಎನ್.ಆರ್.ಸೋಮನಾಥ್, ಅಶ್ವತ್ಥ್. ಕೆ,ಘಟಕದ 60ಗೃಹರಕ್ಷಕರು,ರಕ್ಷಕಿಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ

ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…

1 hour ago

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

6 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

6 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

9 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

9 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

10 hours ago