Advertisement
ಸುದ್ದಿಗಳು

ಸುಳ್ಯ ಗೃಹರಕ್ಷಕದಳ ಘಟಕ ಕ್ರಿಯಾಶೀಲ – ಡಾ|ಮುರಲೀ ಮೋಹನ್ ಚೂಂತಾರು

Share

ಸುಳ್ಯ: ಜಿಲ್ಲೆಯಲ್ಲಿ ಸುಳ್ಯ ಗೃಹರಕ್ಷಕದಳದ ಘಟಕ ಅತ್ಯಂತ ಕ್ರಿಯಾಶೀಲ ಘಟಕ ಹಾಗೂ ಪ್ರಸ್ತುತ ವರ್ಷಗಳಲ್ಲಿ ಪ್ರಾಕೃತಿಕ ವಿಕೋಪ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ರಕ್ಷಿಸುವ ಮೂಲಕ ಜಿಲ್ಲಾ ಗೃಹರಕ್ಷಕ ಇಲಾಖೆ ಉತ್ತಮ ಕಾರ್ಯ ನಿರ್ವಹಿಸಿದೆ ಎಂದು ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ|ಮುರಲೀ ಮೋಹನ್ ಚೂಂತಾರು ಹೇಳಿದರು.

ಅವರು  ಸುಳ್ಯ ಜೂನಿಯರ್ ಕಾಲೇಜು ಬಳಿ ಇರುವ ಸುಳ್ಯ ಗೃಹರಕ್ಷಕದಳ ಹಾಗೂ ಪೌರರಕ್ಷಣಾದಳ ಕಚೇರಿಗೆ ಭೇಟಿ  ನೀಡಿದ ಬಳಿಕ ಮಾತನಾಡಿದರು. ಇದೇ ಸಂದರ್ಭ  ಘಟಕದ ಕಚೇರಿಯಲ್ಲಿ ಪ್ರತಿ ಗೃಹರಕ್ಷಕರ ಅಹವಾಲು ಸ್ವೀಕರಿಸಿದರು.

ಘಟಕದ ವತಿಯಿಂದ ವನಮಹೋತ್ಸವ: ಸುಳ್ಯ ಘಟಕದ ಕಚೇರಿ ಆವರಣದಲ್ಲಿ ವನಮಹೋತ್ಸವ ನಡೆಯಿತು. ಈ ವೇಳೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸುಳ್ಯ ಲಯನ್ಸ್ ಕ್ಲಬ್ ನ ಮಾಜಿ ಗವರ್ನರ್ ಲಯನ್ಸ್ ಎಂ.ಬಿ.ಸದಾಶಿವ ಮಾತನಾಡಿ ಪ್ರಸ್ತುತ ವರ್ಷಗಳಲ್ಲಿ ಸುಳ್ಯ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪ ಸಮಯದಲ್ಲಿ ಪರಿಣಾಮಕಾರಿ ಕರ್ತವ್ಯ ನಿರ್ವಹಿಸಿದ ಗೃಹರಕ್ಷಕರನ್ನು ಅಭಿನಂದಿಸಿದರು ಹಾಗೂ ತುರ್ತು ಸಂಧರ್ಭದಲ್ಲಿ ತಮ್ಮ ಪ್ರಾಣದ ಹಂಗನ್ನೂ ತೊರೆದು ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಮಾಡಿದ ಗೃಹರಕ್ಷಕದಳದ ಕಾರ್ಯ ಶ್ಲಾಘನೀಯ ಗೃಹರಕ್ಷಕರು ಸಮಾಜದ ಆಸ್ತಿ ಎಂದು ನುಡಿದರು.

ಸುಳ್ಯ ಅರಣ್ಯ ಅಭಿವೃದ್ಧಿ ನಿಗಮದ ಮೆನೇಜರ್ ಲಯನ್ಸ್ ರಂಗನಾಥ್ ಮಾತನಾಡಿ ಮನಷ್ಯನ ಸ್ವಾರ್ಥಕ್ಕಾಗಿ ಪರಿಸರ ನಾಶವಾಗುತ್ತಿದೆ ಪರಿಸರದ ಅಸೋಮತೋಲನದಿಂದ ನಮಗೆ ತೊಂದರೆ ನಮಗಾಗಿ ಪರಿಸರ ರಕ್ಷಣೆ ಅನಿವಾರ್ಯ ಗೃಹರಕ್ಷಕದಳದ ವನಮಹೋತ್ಸವದಂತಹ ಕಾರ್ಯಕ್ರಮ ಶ್ಲಾಘನೀಯ ಎಂದರು.

ಕಮಾಂಡೆಂಟ್ ಅವರಿಗೆ ಸುಳ್ಯ ಘಟಕದಿಂದ ಸನ್ಮಾನ: ಇದೆ ಸಂಧರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಡಾ|ಮುರಲೀ ಮೋಹನ್ ಚೂಂತಾರು ಅವರು  ಬರೆದ ಸಂಜೀವಿನಿ ಎಂಬ ಪುಸ್ತಕ ಕ್ಕೆ ರಾಜ್ಯ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಅವರನ್ನು ಘಟಕದ ವತಿಯಿಂದ ಸುಳ್ಯ ಲಯನ್ಸ್ ಅಧಕ್ಷರಾದ ಗಂಗಾಧರ ರೈ ಹಾಗೂ ಎಂ.ಬಿ.ಸದಾಶಿವ ರವರು ಸನ್ಮಾನಿಸಿದರು.

ಈ ವೇಳೆಗೆ ಸುಳ್ಯ ಘಟಕಾಧಿಕಾರಿ ಜಯಂತ್ ಶೆಟ್ಟಿ , ಸುಳ್ಯ ಘಟಕದ ಸಾರ್ಜೆಂಟ್ ಅಬ್ದುಲ್ ಗಫೋರ್, ರಾಜೇಶ್.ಬಿ ಎನ್.ಆರ್.ಸೋಮನಾಥ್, ಅಶ್ವತ್ಥ್. ಕೆ,ಘಟಕದ 60ಗೃಹರಕ್ಷಕರು,ರಕ್ಷಕಿಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

4 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

12 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

16 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

21 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago