ಸುಳ್ಯ ಚೆನ್ನಕೇಶವನಿಗೆ ವೈಭವದ ರಥೋತ್ಸವ

January 12, 2020
9:41 PM

ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರ ಕಂಠದಿಂದ ಹೊರ ಹೊಮ್ಮಿದ ಚೆನ್ನಕೇಶವನಿಗೆ ಗೋವಿಂದ.. ಗೋವಿಂದ ಜಯ ಘೋಷದ ಮಧ್ಯೆ ರಥೋತ್ಸವ ನಡೆಯಿತು.

Advertisement

ದೇವಸ್ಥಾನಕ್ಕೆ ಕಲ್ಕುಡ ಭಂಡಾರ ಆಗಮಿಸಿದ ಬಳಿಕ ವಿಶೇಷ ಪೂಜೆ ಮತ್ತು ಉತ್ಸವ ಬಲಿ ನಡೆದು ಚೆನ್ನಕೇಶವ ದೇವರನ್ನು ರಥದಲ್ಲಿ ಕುಳ್ಳಿರಿಸಲಾಯಿತು. ರಥದಲ್ಲಿ ವಿಶೇಷ ಪೂಜೆಯ ಬಳಿಕ ರಥವು ರಥಬೀದಿಯಲ್ಲಿ ಸಾಗಿತು. ಕಲ್ಕುಡ ದೈವ ಮತ್ತು ಕಾನತ್ತಿಲ ದೈವದ ಕೋಲಗಳು ರಥೋತ್ಸವದ ಜೊತೆಯಲ್ಲಿ ಆಗಮಿಸಿತು. ಸಾವಿರಾರು ಭಕ್ತರ ಮುಗಿಲು ಮುಟ್ಟಿದ ಉದ್ಘಾರದ ಮಧ್ಯೆ ರಥಬೀದಿಯಲ್ಲಿ ಸಾಗಿ ಬಂದ ರಥವು ಮುಖ್ಯ ರಸ್ತೆಯ ದ್ವಾರದ ಬಳಿಯ ಕಟ್ಟೆಯ ಬಳಿಗೆ ಆಗಮಿಸಿತು.

ಚೆನ್ನಕೇಶವ ದೇವರನ್ನು ರಥದಿಂದ ಇಳಿಸಿ ಶೃಂಗರಿಸಿದ್ದ ಕಟ್ಟೆಯಲ್ಲಿ ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ನಡೆದು ಪ್ರಸಾದ ವಿತರಿಸಿದ ಬಳಿಕ ದೇವರು ರಥದಲ್ಲಿ ದೇವಾಲಯಕ್ಕೆ ಹಿಂತಿರುಗಿತು.

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ
July 10, 2025
7:42 PM
by: The Rural Mirror ಸುದ್ದಿಜಾಲ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ
June 25, 2025
6:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group