ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರ ಕಂಠದಿಂದ ಹೊರ ಹೊಮ್ಮಿದ ಚೆನ್ನಕೇಶವನಿಗೆ ಗೋವಿಂದ.. ಗೋವಿಂದ ಜಯ ಘೋಷದ ಮಧ್ಯೆ ರಥೋತ್ಸವ ನಡೆಯಿತು.
ದೇವಸ್ಥಾನಕ್ಕೆ ಕಲ್ಕುಡ ಭಂಡಾರ ಆಗಮಿಸಿದ ಬಳಿಕ ವಿಶೇಷ ಪೂಜೆ ಮತ್ತು ಉತ್ಸವ ಬಲಿ ನಡೆದು ಚೆನ್ನಕೇಶವ ದೇವರನ್ನು ರಥದಲ್ಲಿ ಕುಳ್ಳಿರಿಸಲಾಯಿತು. ರಥದಲ್ಲಿ ವಿಶೇಷ ಪೂಜೆಯ ಬಳಿಕ ರಥವು ರಥಬೀದಿಯಲ್ಲಿ ಸಾಗಿತು. ಕಲ್ಕುಡ ದೈವ ಮತ್ತು ಕಾನತ್ತಿಲ ದೈವದ ಕೋಲಗಳು ರಥೋತ್ಸವದ ಜೊತೆಯಲ್ಲಿ ಆಗಮಿಸಿತು. ಸಾವಿರಾರು ಭಕ್ತರ ಮುಗಿಲು ಮುಟ್ಟಿದ ಉದ್ಘಾರದ ಮಧ್ಯೆ ರಥಬೀದಿಯಲ್ಲಿ ಸಾಗಿ ಬಂದ ರಥವು ಮುಖ್ಯ ರಸ್ತೆಯ ದ್ವಾರದ ಬಳಿಯ ಕಟ್ಟೆಯ ಬಳಿಗೆ ಆಗಮಿಸಿತು.
ಚೆನ್ನಕೇಶವ ದೇವರನ್ನು ರಥದಿಂದ ಇಳಿಸಿ ಶೃಂಗರಿಸಿದ್ದ ಕಟ್ಟೆಯಲ್ಲಿ ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ನಡೆದು ಪ್ರಸಾದ ವಿತರಿಸಿದ ಬಳಿಕ ದೇವರು ರಥದಲ್ಲಿ ದೇವಾಲಯಕ್ಕೆ ಹಿಂತಿರುಗಿತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…