ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರ ಕಂಠದಿಂದ ಹೊರ ಹೊಮ್ಮಿದ ಚೆನ್ನಕೇಶವನಿಗೆ ಗೋವಿಂದ.. ಗೋವಿಂದ ಜಯ ಘೋಷದ ಮಧ್ಯೆ ರಥೋತ್ಸವ ನಡೆಯಿತು.
ದೇವಸ್ಥಾನಕ್ಕೆ ಕಲ್ಕುಡ ಭಂಡಾರ ಆಗಮಿಸಿದ ಬಳಿಕ ವಿಶೇಷ ಪೂಜೆ ಮತ್ತು ಉತ್ಸವ ಬಲಿ ನಡೆದು ಚೆನ್ನಕೇಶವ ದೇವರನ್ನು ರಥದಲ್ಲಿ ಕುಳ್ಳಿರಿಸಲಾಯಿತು. ರಥದಲ್ಲಿ ವಿಶೇಷ ಪೂಜೆಯ ಬಳಿಕ ರಥವು ರಥಬೀದಿಯಲ್ಲಿ ಸಾಗಿತು. ಕಲ್ಕುಡ ದೈವ ಮತ್ತು ಕಾನತ್ತಿಲ ದೈವದ ಕೋಲಗಳು ರಥೋತ್ಸವದ ಜೊತೆಯಲ್ಲಿ ಆಗಮಿಸಿತು. ಸಾವಿರಾರು ಭಕ್ತರ ಮುಗಿಲು ಮುಟ್ಟಿದ ಉದ್ಘಾರದ ಮಧ್ಯೆ ರಥಬೀದಿಯಲ್ಲಿ ಸಾಗಿ ಬಂದ ರಥವು ಮುಖ್ಯ ರಸ್ತೆಯ ದ್ವಾರದ ಬಳಿಯ ಕಟ್ಟೆಯ ಬಳಿಗೆ ಆಗಮಿಸಿತು.
ಚೆನ್ನಕೇಶವ ದೇವರನ್ನು ರಥದಿಂದ ಇಳಿಸಿ ಶೃಂಗರಿಸಿದ್ದ ಕಟ್ಟೆಯಲ್ಲಿ ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ನಡೆದು ಪ್ರಸಾದ ವಿತರಿಸಿದ ಬಳಿಕ ದೇವರು ರಥದಲ್ಲಿ ದೇವಾಲಯಕ್ಕೆ ಹಿಂತಿರುಗಿತು.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…