ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರ ಕಂಠದಿಂದ ಹೊರ ಹೊಮ್ಮಿದ ಚೆನ್ನಕೇಶವನಿಗೆ ಗೋವಿಂದ.. ಗೋವಿಂದ ಜಯ ಘೋಷದ ಮಧ್ಯೆ ರಥೋತ್ಸವ ನಡೆಯಿತು.
ದೇವಸ್ಥಾನಕ್ಕೆ ಕಲ್ಕುಡ ಭಂಡಾರ ಆಗಮಿಸಿದ ಬಳಿಕ ವಿಶೇಷ ಪೂಜೆ ಮತ್ತು ಉತ್ಸವ ಬಲಿ ನಡೆದು ಚೆನ್ನಕೇಶವ ದೇವರನ್ನು ರಥದಲ್ಲಿ ಕುಳ್ಳಿರಿಸಲಾಯಿತು. ರಥದಲ್ಲಿ ವಿಶೇಷ ಪೂಜೆಯ ಬಳಿಕ ರಥವು ರಥಬೀದಿಯಲ್ಲಿ ಸಾಗಿತು. ಕಲ್ಕುಡ ದೈವ ಮತ್ತು ಕಾನತ್ತಿಲ ದೈವದ ಕೋಲಗಳು ರಥೋತ್ಸವದ ಜೊತೆಯಲ್ಲಿ ಆಗಮಿಸಿತು. ಸಾವಿರಾರು ಭಕ್ತರ ಮುಗಿಲು ಮುಟ್ಟಿದ ಉದ್ಘಾರದ ಮಧ್ಯೆ ರಥಬೀದಿಯಲ್ಲಿ ಸಾಗಿ ಬಂದ ರಥವು ಮುಖ್ಯ ರಸ್ತೆಯ ದ್ವಾರದ ಬಳಿಯ ಕಟ್ಟೆಯ ಬಳಿಗೆ ಆಗಮಿಸಿತು.
ಚೆನ್ನಕೇಶವ ದೇವರನ್ನು ರಥದಿಂದ ಇಳಿಸಿ ಶೃಂಗರಿಸಿದ್ದ ಕಟ್ಟೆಯಲ್ಲಿ ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ನಡೆದು ಪ್ರಸಾದ ವಿತರಿಸಿದ ಬಳಿಕ ದೇವರು ರಥದಲ್ಲಿ ದೇವಾಲಯಕ್ಕೆ ಹಿಂತಿರುಗಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…