ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರ ಕಂಠದಿಂದ ಹೊರ ಹೊಮ್ಮಿದ ಚೆನ್ನಕೇಶವನಿಗೆ ಗೋವಿಂದ.. ಗೋವಿಂದ ಜಯ ಘೋಷದ ಮಧ್ಯೆ ರಥೋತ್ಸವ ನಡೆಯಿತು.
ದೇವಸ್ಥಾನಕ್ಕೆ ಕಲ್ಕುಡ ಭಂಡಾರ ಆಗಮಿಸಿದ ಬಳಿಕ ವಿಶೇಷ ಪೂಜೆ ಮತ್ತು ಉತ್ಸವ ಬಲಿ ನಡೆದು ಚೆನ್ನಕೇಶವ ದೇವರನ್ನು ರಥದಲ್ಲಿ ಕುಳ್ಳಿರಿಸಲಾಯಿತು. ರಥದಲ್ಲಿ ವಿಶೇಷ ಪೂಜೆಯ ಬಳಿಕ ರಥವು ರಥಬೀದಿಯಲ್ಲಿ ಸಾಗಿತು. ಕಲ್ಕುಡ ದೈವ ಮತ್ತು ಕಾನತ್ತಿಲ ದೈವದ ಕೋಲಗಳು ರಥೋತ್ಸವದ ಜೊತೆಯಲ್ಲಿ ಆಗಮಿಸಿತು. ಸಾವಿರಾರು ಭಕ್ತರ ಮುಗಿಲು ಮುಟ್ಟಿದ ಉದ್ಘಾರದ ಮಧ್ಯೆ ರಥಬೀದಿಯಲ್ಲಿ ಸಾಗಿ ಬಂದ ರಥವು ಮುಖ್ಯ ರಸ್ತೆಯ ದ್ವಾರದ ಬಳಿಯ ಕಟ್ಟೆಯ ಬಳಿಗೆ ಆಗಮಿಸಿತು.
ಚೆನ್ನಕೇಶವ ದೇವರನ್ನು ರಥದಿಂದ ಇಳಿಸಿ ಶೃಂಗರಿಸಿದ್ದ ಕಟ್ಟೆಯಲ್ಲಿ ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ನಡೆದು ಪ್ರಸಾದ ವಿತರಿಸಿದ ಬಳಿಕ ದೇವರು ರಥದಲ್ಲಿ ದೇವಾಲಯಕ್ಕೆ ಹಿಂತಿರುಗಿತು.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…