ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಸುಳ್ಯದ ಶ್ರೀ ವೆಂಕಟ್ರಮಣ ದೇವ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಲಕ್ಷ್ಮಣ ಶೆಣೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಅಭಿಮಾನಿಗಳು ಸೋಮವಾರ ಪ್ರಾರ್ಥನೆ ನಡೆಸಿದರು. ಡಿ.ಕೆ.ಶಿವಕುಮಾರ್ ಅವರು ಕೂಡಲೇ ಜಾಮೀನು ಪಡೆದು ಬಿಡುಗಡೆಯಾದರೆ ದೇವಸ್ಥಾನದಲ್ಲಿ ವಿಶೇಷ ಸೇವೆ ನಡೆಸುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಶೆಣೈ ತಿಳಿಸಿದ್ದಾರೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ದಿನೇಶ್ ಮಡ್ತಿಲ, ಶ್ರೀಲತಾ ಪ್ರಸನ್ನ, ಅನಿಲ್ ಬಳ್ಳಡ್ಕ, ಶಶಿಧರ, ವಸಂತ ಕುದ್ಪಾಜೆ, ಮಧುಸೂದನ ಬೂಡು, ತೀರ್ಥಪ್ರಸಾದ್ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…