ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಸುಳ್ಯದ ಶ್ರೀ ವೆಂಕಟ್ರಮಣ ದೇವ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಲಕ್ಷ್ಮಣ ಶೆಣೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಅಭಿಮಾನಿಗಳು ಸೋಮವಾರ ಪ್ರಾರ್ಥನೆ ನಡೆಸಿದರು. ಡಿ.ಕೆ.ಶಿವಕುಮಾರ್ ಅವರು ಕೂಡಲೇ ಜಾಮೀನು ಪಡೆದು ಬಿಡುಗಡೆಯಾದರೆ ದೇವಸ್ಥಾನದಲ್ಲಿ ವಿಶೇಷ ಸೇವೆ ನಡೆಸುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಶೆಣೈ ತಿಳಿಸಿದ್ದಾರೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ದಿನೇಶ್ ಮಡ್ತಿಲ, ಶ್ರೀಲತಾ ಪ್ರಸನ್ನ, ಅನಿಲ್ ಬಳ್ಳಡ್ಕ, ಶಶಿಧರ, ವಸಂತ ಕುದ್ಪಾಜೆ, ಮಧುಸೂದನ ಬೂಡು, ತೀರ್ಥಪ್ರಸಾದ್ ಉಪಸ್ಥಿತರಿದ್ದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…