ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರ ವರ್ಗಾವಣೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ವರ್ಗಾವಣೆ ವಿರೋಧಿಸಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ- ಕರ್ನಾಟಕ ಇದರ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವೇದಿಕೆಯ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ಮಾತನಾಡಿ ಕೆಲವೇ ತಿಂಗಳಲ್ಲಿ ಜನಪರ ಅಧಿಕಾರಿ ಎಂದು ಹೆಸರು ಗಳಿಸಿರುವ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಿಸಲಾಗಿದೆ. ಇದರ ವಿರುದ್ಧ ಅಹೋರಾತ್ರಿ ಧರಣಿ ನಡೆಸಲಾಗುವುದು. ಸಹಾಯಕ ಕಮೀಷನರ್ ಅಥವಾ ಜಿಲ್ಲಾಧಿಕಾರಿ ಸುಳ್ಯಕ್ಕೆ ಬಂದು ವರ್ಗಾವಣೆ ಹಿಂಪಡೆಯುತ್ತೇವೆ ಎಂದು ಭರವಸೆ ನೀಡದಿದ್ದರೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು. ಮಳೆ, ಪ್ರಾಕೃತಿಕ ವಿಕೋಪದಿಂದ ಜನರು ತತ್ತರಿಸಿರುವ ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಯನ್ನು ವರ್ಗಾವಣೆ ಮಾಡಿರುವುದು ಅಕ್ಷಮ್ಯ ಎಂದು ಹೇಳಿದರು.
ಬಳಿಕ ದೂರವಾಣಿ ಮೂಲಕ ಸಹಾಯಕ ಕಮೀಷನರ್ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿ ಅವರು ನೀಡಿದ ಭರವಸಯೆ ಮೇರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಸುಂದರ ಪಾಟಾಜೆ, ವಕೀಲ ಪ್ರದೀಪ್ ಕುಮಾರ್ ಕೆ.ಎಲ್, ಮುಖಂಡರಾದ ಕೆ.ಕೆ.ನಾಯ್ಕ್, ವಿಠಲ ರೈ ಪೋಲಾಜೆ, ಕುಶಾಲಪ್ಪ, ವಿಜಯ ಪಾಟಾಜೆ, ಪರಮೇಶ್ವರ, ವಕೀಲ ಪ್ರದೀಪ್ ಕುಮಾರ್ ಕೆ.ಎಲ್. ಮಾತನಾಡಿದರು.
ವರ್ಗಾವಣೆಗೆ ರಾಜಕೀಯ ಒತ್ತಡ ಕಾರಣವೇ.?
ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ವರ್ಗಾವಣೆಗೆ ರಾಜಕೀಯ ಒತ್ತಡ ಕಾರಣವೇ. ಹೀಗೊಂದು ಗುಮಾನಿ ಈಗ ಹಬ್ಬಿದೆ. ಪ್ರತಿಭಟನೆಯಲ್ಲಿ ಮಾತನಾಡಿದ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ರಾಜಕೀಯ ಷಡ್ಯಂತ್ರದಿಂದ ತಹಶೀಲ್ದಾರ್ ವರ್ಗಾವಣೆ ಆಗಿದೆ ಎಂದು ಹೇಳಿದ್ದಾರೆ. ತಹಶೀಲ್ದಾರ್ ವರ್ಗಾವಣೆ ತಡೆ ಹಿಡಿಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…