Advertisement
ಸುದ್ದಿಗಳು

ಸುಳ್ಯ ತಹಶೀಲ್ದಾರ್ ವರ್ಗಾವಣೆ ಆದೇಶಕ್ಕೆ ತಡೆ : ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಆದೇಶ

Share

ಸುಳ್ಯ:  ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರ ವರ್ಗಾವಣೆ ಆದೇಶಕ್ಕೆ ತಡೆ ಬಿದ್ದಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಕುಮಾರಸ್ವಾಮಿ ಸರಕಾರ ಜುಲೈ ತಿಂಗಳಲ್ಲಿ ಮಾಡಿದ್ದ ಎಲ್ಲಾ ವರ್ಗಾವಣೆಗಳನ್ನು ತಡೆ ಹಿಡಿಯಲು ಆದೇಶ ನೀಡಿದ್ದರು. ಈ ಹಿನ್ನಲೆಯಲ್ಲಿ ಸುಳ್ಯ ತಹಶೀಲ್ದಾರ್ ವರ್ಗಾವಣೆ ಆದೇಶಕ್ಕೂ ತಡೆ ಬಿದ್ದಿದೆ.

ತಹಶೀಲ್ದಾರ್ ಎನ್‌.ಎ‌.ಕುಂಞಿ ಅಹಮ್ಮದ್ ಅವರು ಅಧಿಕಾರವನ್ನು ಕಡಬ ತಹಶೀಲ್ದಾರ್ ಅವರಿಗೆ ಹಸ್ತಾಂತರಿಸಿ ಸುಳ್ಯದಿಂದ ತೆರಳಿದ್ದರು. ಇದೀಗ ವರ್ಗಾವಣೆಗೆ ತಡೆ ಆಗಿರುವ ಹಿನ್ನಲೆಯಲ್ಲಿ ಕೂಡಲೇ ಮತ್ತೆ ಸುಳ್ಯದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಅವರಿಗೆ ಮೇಲಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜನರ ಪ್ರಾರ್ಥನೆಯ ಫಲ- ಕುಂಞಿ ಅಹಮ್ಮದ್:

ವರ್ಗಾವಣೆಗೆ ತಡೆಯಾಗಿರುವ ಹಿನ್ನಲೆಯಲ್ಲಿ ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಆದೇಶ ಬಂದಿರುವುದನ್ನು ಕುಂಞಿ ಅಹಮ್ಮದ್ ಖಚಿತಪಡಿಸಿಕೊಂಡಿದ್ದಾರೆ. ವರ್ಗಾವಣೆ ಆಗಿದೆ ಎಂದು ತಿಳಿದಾಗ ಜನರ ಪ್ರೀತಿ ನೋಡಿ ನಿಜಕ್ಕೂ ವಿಸ್ಮಯಗೊಂಡಿದ್ದೇನೆ. ಜನರ ಪ್ರಾರ್ಥನೆಯ ಫಲದಿಂದ ಮತ್ತೆ ಇಲ್ಲೇ ಮುಂದುವರಿಯಲು ಸಾಧ್ಯವಾಗಿದೆ ಎಂಬುದು ನನ್ನ ಅನಿಸಿಕೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಜನರ ಮತ್ತು ಜನ ಪ್ರತಿನಿಧಿಗಳ ಸಹಕಾರದಿಂದ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇನೆ. ಸದ್ಯದಲ್ಲಿಯೇ ಪ್ಲಾಸ್ಟಿಕ್ ಮುಕ್ತ ಸುಳ್ಯ ಆಂದೋಲನ ಪ್ರಾರಂಭಿಸುತ್ತೇನೆ. ಸ್ವಚ್ಛತಾ ಆಂದೋಲನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಹರ್ಷ:
ಹೊಸ ಸರಕಾರ ಬಂದು ಹಿಂದಿನ ಸರಕಾರ ಮಾಡಿದ್ದ ಜುಲೈ ತಿಂಗಳ ವರ್ಗಾವಣೆ ಆದೇಶ ರದ್ದುಗೊಂಡಿರುವುದರಿಂದ ತಹಶೀಲ್ದಾರ್ ವರ್ಗಾವಣೆಗೆ ತಡೆ ಬಿದ್ದಿರುವುದಕ್ಕೆ ಸಾರ್ವಜನಿಕ ವಲಯದಲ್ಲೂ ಹರ್ಷ ವ್ಯಕ್ತವಾಗಿದೆ. ತಹಶೀಲ್ದಾರ್ ಕುಂಞಿ ಅಹಮ್ಮದ್ ವರ್ಗಾವಣೆ ರದ್ದು ಮಾಡಬೇಕೆಂದು ಪ್ರತಿಭಟನೆಗಳು ನಡೆದಿತ್ತು. ವರ್ಗಾವಣೆ ರದ್ದುಪಡಿಸಲು ಹಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಮೇಲಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕವು ವ್ಯಾಪಕ ಒತ್ತಾಯ ಕೇಳಿ ಬಂದಿತ್ತು. ಕೇವಲ ಐದು ತಿಂಗಳಲ್ಲಿ ಜನಪರ ಅಧಿಕಾರಿ ಎಂದು ಹೆಸರು ಗಳಿಸಿದ್ದ ತಹಶೀಲ್ದಾರ್ ವರ್ಗಾವಣೆಯಿಂದ ಜನರಲ್ಲಿ ತೀವ್ರ ನಿರಾಶೆ ಉಂಟಾಗಿತ್ತು. ಇದೀಗ ವರ್ಗಾವಣೆಗೆ ಬ್ರೇಕ್ ಬಿದ್ದಿರುವುದು ಹರ್ಷ ತಂದಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

7 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

14 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 days ago