Advertisement
ಸುದ್ದಿಗಳು

ಸುಳ್ಯ ತಹಶೀಲ್ದಾರ್ ವರ್ಗಾವಣೆ- ಪುತ್ತೂರು ತಹಶೀಲ್ದಾರ್ ಗೆ ಚಾರ್ಜ್ ನೀಡಿ ತೆರಳಿದ ಕುಂಞಿ ಅಹಮ್ಮದ್

Share

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ಮಂಡ್ಯ ಜಿಲ್ಲೆಯ ನೆಲಮಂಗಲ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದೆ. ಪುತ್ತೂರು ತಹಶೀಲ್ದಾರ್ ಅನಂತಶಂಕರ ಅವರಿಗೆ ಅಧಿಕಾರ ಹಸ್ತಾಂತರಿಸಿದ ಕುಂಞಿ ಅಹಮ್ಮದ್ ಫೆ.1 ರಂದು ಸುಳ್ಯದಿಂದ ತೆರಳಿದ್ದಾರೆ. ಸುಳ್ಯಕ್ಕೆ ತಹಶೀಲ್ದಾರ್ ಇನ್ನಷ್ಟೇ ನೇಮಕ ಆಗಬೇಕಾಗಿದ್ದು ಅದುವರೆಗೆ ಅನಂತಶಂಕರ್ ಪ್ರಭಾರ ತಹಶೀಲ್ದಾರ್ ಆಗಿರುತ್ತಾರೆ.

ಒಂದು ವರುಷದಿಂದ ಸುಳ್ಯದ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಕುಂಞಿ ಅಹಮ್ಮದ್ ಜನಪರ ಅಧಿಕಾರಿ ಎಂದು ಹೆಸರು ಪಡೆದಿದ್ದರು. ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ತ್ವರಿತವಾಗಿ ಕೆಲಸ ಮಾಡಿಕೊಡುತ್ತಿದ್ದರು. ಜನರಿಗೆ ಅತ್ಯಂತ ಹತ್ತಿರವಾಗಿ ಜನರ ಮಧ್ಯೆ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಅವಧಿಯಲ್ಲಿ ನಾಲ್ಕನೇ ಬಾರಿ ಇವರ ವರ್ಗಾವಣೆ ಆಗಿದೆ. ಈ ಹಿಂದೆ ಮೂರು ಬಾರಿ ಇವರಿಗೆ ವರ್ಗಾವಣೆ ಆಗಿದ್ದರೂ ಕಾರಣಾಂತರಗಳಿಂದ ತಡೆ ಹಿಡಿಯಲಾಗಿತ್ತು. ಇವರ ವರ್ಗಾವಣೆಗೆ ಜನರಿಂದ ಭಾರೀ ವಿರೋಧ, ಪ್ರತಿಭಟನೆಗಳು ನಡೆದಿತ್ತು. ಆದರೆ ಅತ್ಯಂತ ಜನಪ್ರಿಯ ಮತ್ತು ನಿಷ್ಟಾವಂತ ಅಧಿಕಾರಿಯನ್ನು ತಾಲೂಕಿನಲ್ಲಿಯೇ ಉಳಿಸಬೇಕೆಂದು ಜನರಿಂದ ಬೇಡಿಕೆ ಇದ್ದರೂ ಅವರನ್ನು ಇಲ್ಲಿ ಉಳಿಸಲು ಜನಪ್ರತಿನಿಧಿಗಳು ಮತ್ತು ಸರಕಾರ ಪ್ರಯತ್ನ ನಡೆಸಿಲ್ಲ ಎಂಬ ನೋವನ್ನು ಸಾರ್ವಜನಿಕರು ತೋಡಿಕೊಳ್ಳುತ್ತಾರೆ. ಇನ್ನೂ ಒಂದೆರಡು ವರುಷ ಸುಳ್ಯದಲ್ಲಿ ಕೆಲಸ ಮಾಡಲು ಕುಂಞಿ ಅಹಮ್ಮದ್ ಮನಸ್ಸು ಮಾಡಿದ್ದರೂ, ಅವರನ್ನು ವರ್ಗಾವಣೆ ಮಾಡಿಸಲು ಕೆಲವೊಂದು ರಾಜಕೀಯ ಒತ್ತಡಗಳು ಕೆಲಸ ಮಾಡಿದೆ ಎಂಬ ಮಾತುಗಳೂ ಸಾರ್ವಜನಿಕ ವಲಯದಲ್ಲಿ ದಟ್ಟವಾಗಿದೆ. ತಾಲೂಕು ಕಚೇರಿಯನ್ನು ದಲ್ಲಾಳಿಗಳಿಂದ ಮುಕ್ತ ಮಾಡಿ ಪಾರದರ್ಶಕ ಮತ್ತು ಜನಸ್ನೇಹಿ ಕಚೇರಿಯನ್ನಾಗಿ ಪರಿವರ್ತಿಸಲು ಕುಂಞಿ ಅಹಮ್ಮದ್ ಪ್ರಯತ್ನ ನಡೆಸಿದ್ದರು. ಇದು ಕೂಡ ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

8 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago