Advertisement
ಸುದ್ದಿಗಳು

ಸುಳ್ಯ ತಹಶೀಲ್ದಾರ್ ವರ್ಗಾವಣೆ- ಪುತ್ತೂರು ತಹಶೀಲ್ದಾರ್ ಗೆ ಚಾರ್ಜ್ ನೀಡಿ ತೆರಳಿದ ಕುಂಞಿ ಅಹಮ್ಮದ್

Share

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ಮಂಡ್ಯ ಜಿಲ್ಲೆಯ ನೆಲಮಂಗಲ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದೆ. ಪುತ್ತೂರು ತಹಶೀಲ್ದಾರ್ ಅನಂತಶಂಕರ ಅವರಿಗೆ ಅಧಿಕಾರ ಹಸ್ತಾಂತರಿಸಿದ ಕುಂಞಿ ಅಹಮ್ಮದ್ ಫೆ.1 ರಂದು ಸುಳ್ಯದಿಂದ ತೆರಳಿದ್ದಾರೆ. ಸುಳ್ಯಕ್ಕೆ ತಹಶೀಲ್ದಾರ್ ಇನ್ನಷ್ಟೇ ನೇಮಕ ಆಗಬೇಕಾಗಿದ್ದು ಅದುವರೆಗೆ ಅನಂತಶಂಕರ್ ಪ್ರಭಾರ ತಹಶೀಲ್ದಾರ್ ಆಗಿರುತ್ತಾರೆ.

ಒಂದು ವರುಷದಿಂದ ಸುಳ್ಯದ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಕುಂಞಿ ಅಹಮ್ಮದ್ ಜನಪರ ಅಧಿಕಾರಿ ಎಂದು ಹೆಸರು ಪಡೆದಿದ್ದರು. ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ತ್ವರಿತವಾಗಿ ಕೆಲಸ ಮಾಡಿಕೊಡುತ್ತಿದ್ದರು. ಜನರಿಗೆ ಅತ್ಯಂತ ಹತ್ತಿರವಾಗಿ ಜನರ ಮಧ್ಯೆ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಅವಧಿಯಲ್ಲಿ ನಾಲ್ಕನೇ ಬಾರಿ ಇವರ ವರ್ಗಾವಣೆ ಆಗಿದೆ. ಈ ಹಿಂದೆ ಮೂರು ಬಾರಿ ಇವರಿಗೆ ವರ್ಗಾವಣೆ ಆಗಿದ್ದರೂ ಕಾರಣಾಂತರಗಳಿಂದ ತಡೆ ಹಿಡಿಯಲಾಗಿತ್ತು. ಇವರ ವರ್ಗಾವಣೆಗೆ ಜನರಿಂದ ಭಾರೀ ವಿರೋಧ, ಪ್ರತಿಭಟನೆಗಳು ನಡೆದಿತ್ತು. ಆದರೆ ಅತ್ಯಂತ ಜನಪ್ರಿಯ ಮತ್ತು ನಿಷ್ಟಾವಂತ ಅಧಿಕಾರಿಯನ್ನು ತಾಲೂಕಿನಲ್ಲಿಯೇ ಉಳಿಸಬೇಕೆಂದು ಜನರಿಂದ ಬೇಡಿಕೆ ಇದ್ದರೂ ಅವರನ್ನು ಇಲ್ಲಿ ಉಳಿಸಲು ಜನಪ್ರತಿನಿಧಿಗಳು ಮತ್ತು ಸರಕಾರ ಪ್ರಯತ್ನ ನಡೆಸಿಲ್ಲ ಎಂಬ ನೋವನ್ನು ಸಾರ್ವಜನಿಕರು ತೋಡಿಕೊಳ್ಳುತ್ತಾರೆ. ಇನ್ನೂ ಒಂದೆರಡು ವರುಷ ಸುಳ್ಯದಲ್ಲಿ ಕೆಲಸ ಮಾಡಲು ಕುಂಞಿ ಅಹಮ್ಮದ್ ಮನಸ್ಸು ಮಾಡಿದ್ದರೂ, ಅವರನ್ನು ವರ್ಗಾವಣೆ ಮಾಡಿಸಲು ಕೆಲವೊಂದು ರಾಜಕೀಯ ಒತ್ತಡಗಳು ಕೆಲಸ ಮಾಡಿದೆ ಎಂಬ ಮಾತುಗಳೂ ಸಾರ್ವಜನಿಕ ವಲಯದಲ್ಲಿ ದಟ್ಟವಾಗಿದೆ. ತಾಲೂಕು ಕಚೇರಿಯನ್ನು ದಲ್ಲಾಳಿಗಳಿಂದ ಮುಕ್ತ ಮಾಡಿ ಪಾರದರ್ಶಕ ಮತ್ತು ಜನಸ್ನೇಹಿ ಕಚೇರಿಯನ್ನಾಗಿ ಪರಿವರ್ತಿಸಲು ಕುಂಞಿ ಅಹಮ್ಮದ್ ಪ್ರಯತ್ನ ನಡೆಸಿದ್ದರು. ಇದು ಕೂಡ ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು ಎಂದು ಹೇಳಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

10 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

12 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

18 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

19 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago