Advertisement
ಸುದ್ದಿಗಳು

ಸುಳ್ಯ ತಹಶೀಲ್ದಾರ್ ವರ್ಗಾವಣೆ- ಪುತ್ತೂರು ತಹಶೀಲ್ದಾರ್ ಗೆ ಚಾರ್ಜ್ ನೀಡಿ ತೆರಳಿದ ಕುಂಞಿ ಅಹಮ್ಮದ್

Share

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ಮಂಡ್ಯ ಜಿಲ್ಲೆಯ ನೆಲಮಂಗಲ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದೆ. ಪುತ್ತೂರು ತಹಶೀಲ್ದಾರ್ ಅನಂತಶಂಕರ ಅವರಿಗೆ ಅಧಿಕಾರ ಹಸ್ತಾಂತರಿಸಿದ ಕುಂಞಿ ಅಹಮ್ಮದ್ ಫೆ.1 ರಂದು ಸುಳ್ಯದಿಂದ ತೆರಳಿದ್ದಾರೆ. ಸುಳ್ಯಕ್ಕೆ ತಹಶೀಲ್ದಾರ್ ಇನ್ನಷ್ಟೇ ನೇಮಕ ಆಗಬೇಕಾಗಿದ್ದು ಅದುವರೆಗೆ ಅನಂತಶಂಕರ್ ಪ್ರಭಾರ ತಹಶೀಲ್ದಾರ್ ಆಗಿರುತ್ತಾರೆ.

ಒಂದು ವರುಷದಿಂದ ಸುಳ್ಯದ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಕುಂಞಿ ಅಹಮ್ಮದ್ ಜನಪರ ಅಧಿಕಾರಿ ಎಂದು ಹೆಸರು ಪಡೆದಿದ್ದರು. ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ತ್ವರಿತವಾಗಿ ಕೆಲಸ ಮಾಡಿಕೊಡುತ್ತಿದ್ದರು. ಜನರಿಗೆ ಅತ್ಯಂತ ಹತ್ತಿರವಾಗಿ ಜನರ ಮಧ್ಯೆ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಅವಧಿಯಲ್ಲಿ ನಾಲ್ಕನೇ ಬಾರಿ ಇವರ ವರ್ಗಾವಣೆ ಆಗಿದೆ. ಈ ಹಿಂದೆ ಮೂರು ಬಾರಿ ಇವರಿಗೆ ವರ್ಗಾವಣೆ ಆಗಿದ್ದರೂ ಕಾರಣಾಂತರಗಳಿಂದ ತಡೆ ಹಿಡಿಯಲಾಗಿತ್ತು. ಇವರ ವರ್ಗಾವಣೆಗೆ ಜನರಿಂದ ಭಾರೀ ವಿರೋಧ, ಪ್ರತಿಭಟನೆಗಳು ನಡೆದಿತ್ತು. ಆದರೆ ಅತ್ಯಂತ ಜನಪ್ರಿಯ ಮತ್ತು ನಿಷ್ಟಾವಂತ ಅಧಿಕಾರಿಯನ್ನು ತಾಲೂಕಿನಲ್ಲಿಯೇ ಉಳಿಸಬೇಕೆಂದು ಜನರಿಂದ ಬೇಡಿಕೆ ಇದ್ದರೂ ಅವರನ್ನು ಇಲ್ಲಿ ಉಳಿಸಲು ಜನಪ್ರತಿನಿಧಿಗಳು ಮತ್ತು ಸರಕಾರ ಪ್ರಯತ್ನ ನಡೆಸಿಲ್ಲ ಎಂಬ ನೋವನ್ನು ಸಾರ್ವಜನಿಕರು ತೋಡಿಕೊಳ್ಳುತ್ತಾರೆ. ಇನ್ನೂ ಒಂದೆರಡು ವರುಷ ಸುಳ್ಯದಲ್ಲಿ ಕೆಲಸ ಮಾಡಲು ಕುಂಞಿ ಅಹಮ್ಮದ್ ಮನಸ್ಸು ಮಾಡಿದ್ದರೂ, ಅವರನ್ನು ವರ್ಗಾವಣೆ ಮಾಡಿಸಲು ಕೆಲವೊಂದು ರಾಜಕೀಯ ಒತ್ತಡಗಳು ಕೆಲಸ ಮಾಡಿದೆ ಎಂಬ ಮಾತುಗಳೂ ಸಾರ್ವಜನಿಕ ವಲಯದಲ್ಲಿ ದಟ್ಟವಾಗಿದೆ. ತಾಲೂಕು ಕಚೇರಿಯನ್ನು ದಲ್ಲಾಳಿಗಳಿಂದ ಮುಕ್ತ ಮಾಡಿ ಪಾರದರ್ಶಕ ಮತ್ತು ಜನಸ್ನೇಹಿ ಕಚೇರಿಯನ್ನಾಗಿ ಪರಿವರ್ತಿಸಲು ಕುಂಞಿ ಅಹಮ್ಮದ್ ಪ್ರಯತ್ನ ನಡೆಸಿದ್ದರು. ಇದು ಕೂಡ ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

10 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago