Advertisement
ಸುದ್ದಿಗಳು

ಸುಳ್ಯ ತಹಶೀಲ್ದಾರ್ ವರ್ಗಾವಣೆ- ಪುತ್ತೂರು ತಹಶೀಲ್ದಾರ್ ಗೆ ಚಾರ್ಜ್ ನೀಡಿ ತೆರಳಿದ ಕುಂಞಿ ಅಹಮ್ಮದ್

Share

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ಮಂಡ್ಯ ಜಿಲ್ಲೆಯ ನೆಲಮಂಗಲ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದೆ. ಪುತ್ತೂರು ತಹಶೀಲ್ದಾರ್ ಅನಂತಶಂಕರ ಅವರಿಗೆ ಅಧಿಕಾರ ಹಸ್ತಾಂತರಿಸಿದ ಕುಂಞಿ ಅಹಮ್ಮದ್ ಫೆ.1 ರಂದು ಸುಳ್ಯದಿಂದ ತೆರಳಿದ್ದಾರೆ. ಸುಳ್ಯಕ್ಕೆ ತಹಶೀಲ್ದಾರ್ ಇನ್ನಷ್ಟೇ ನೇಮಕ ಆಗಬೇಕಾಗಿದ್ದು ಅದುವರೆಗೆ ಅನಂತಶಂಕರ್ ಪ್ರಭಾರ ತಹಶೀಲ್ದಾರ್ ಆಗಿರುತ್ತಾರೆ.

ಒಂದು ವರುಷದಿಂದ ಸುಳ್ಯದ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಕುಂಞಿ ಅಹಮ್ಮದ್ ಜನಪರ ಅಧಿಕಾರಿ ಎಂದು ಹೆಸರು ಪಡೆದಿದ್ದರು. ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ತ್ವರಿತವಾಗಿ ಕೆಲಸ ಮಾಡಿಕೊಡುತ್ತಿದ್ದರು. ಜನರಿಗೆ ಅತ್ಯಂತ ಹತ್ತಿರವಾಗಿ ಜನರ ಮಧ್ಯೆ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಅವಧಿಯಲ್ಲಿ ನಾಲ್ಕನೇ ಬಾರಿ ಇವರ ವರ್ಗಾವಣೆ ಆಗಿದೆ. ಈ ಹಿಂದೆ ಮೂರು ಬಾರಿ ಇವರಿಗೆ ವರ್ಗಾವಣೆ ಆಗಿದ್ದರೂ ಕಾರಣಾಂತರಗಳಿಂದ ತಡೆ ಹಿಡಿಯಲಾಗಿತ್ತು. ಇವರ ವರ್ಗಾವಣೆಗೆ ಜನರಿಂದ ಭಾರೀ ವಿರೋಧ, ಪ್ರತಿಭಟನೆಗಳು ನಡೆದಿತ್ತು. ಆದರೆ ಅತ್ಯಂತ ಜನಪ್ರಿಯ ಮತ್ತು ನಿಷ್ಟಾವಂತ ಅಧಿಕಾರಿಯನ್ನು ತಾಲೂಕಿನಲ್ಲಿಯೇ ಉಳಿಸಬೇಕೆಂದು ಜನರಿಂದ ಬೇಡಿಕೆ ಇದ್ದರೂ ಅವರನ್ನು ಇಲ್ಲಿ ಉಳಿಸಲು ಜನಪ್ರತಿನಿಧಿಗಳು ಮತ್ತು ಸರಕಾರ ಪ್ರಯತ್ನ ನಡೆಸಿಲ್ಲ ಎಂಬ ನೋವನ್ನು ಸಾರ್ವಜನಿಕರು ತೋಡಿಕೊಳ್ಳುತ್ತಾರೆ. ಇನ್ನೂ ಒಂದೆರಡು ವರುಷ ಸುಳ್ಯದಲ್ಲಿ ಕೆಲಸ ಮಾಡಲು ಕುಂಞಿ ಅಹಮ್ಮದ್ ಮನಸ್ಸು ಮಾಡಿದ್ದರೂ, ಅವರನ್ನು ವರ್ಗಾವಣೆ ಮಾಡಿಸಲು ಕೆಲವೊಂದು ರಾಜಕೀಯ ಒತ್ತಡಗಳು ಕೆಲಸ ಮಾಡಿದೆ ಎಂಬ ಮಾತುಗಳೂ ಸಾರ್ವಜನಿಕ ವಲಯದಲ್ಲಿ ದಟ್ಟವಾಗಿದೆ. ತಾಲೂಕು ಕಚೇರಿಯನ್ನು ದಲ್ಲಾಳಿಗಳಿಂದ ಮುಕ್ತ ಮಾಡಿ ಪಾರದರ್ಶಕ ಮತ್ತು ಜನಸ್ನೇಹಿ ಕಚೇರಿಯನ್ನಾಗಿ ಪರಿವರ್ತಿಸಲು ಕುಂಞಿ ಅಹಮ್ಮದ್ ಪ್ರಯತ್ನ ನಡೆಸಿದ್ದರು. ಇದು ಕೂಡ ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

5 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

5 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

6 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

6 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

15 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

19 hours ago