Advertisement
ಸುದ್ದಿಗಳು

ಸುಳ್ಯ ತಾಪಂ ಸಭೆ : ಆಡಳಿತ ಪಕ್ಷದ ಸದಸ್ಯರ ನಡುವಿನ ಭಿನ್ನಾಭಿಪ್ರಾಯ ಸಭೆಯಲ್ಲೇ ಬಹಿರಂಗ…!

Share

ಸುಳ್ಯ:  ಸುಳ್ಯ ತಾಲೂಕು ಪಂಚಾಯತ್ ಸಾಮಾನ್ಯ ಸಭೆ  ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಈ ಬಾರಿಯ ಸಭೆಯಲ್ಲಿ ಆಡಳಿತ ಪಕ್ಷದ  ಸದಸ್ಯರ ನಡುವಿನ ಭಿನ್ನಾಭಿಪ್ರಾಯ ಸಭೆಯಲ್ಲಿ ಬಹಿರಂಗಗೊಂಡಿದೆ.

ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿಜೆಪಿ ಸದಸ್ಯ ರಾಧಾಕೃಷ್ಣ ಬೊಳ್ಳೂರು  ಅವರ ನಿಲುವನ್ನು ತಾಪಂ ಅಧ್ಯಕ್ಷ ಹಾಗೂ ಬಿಜೆಪಿ ಸದಸ್ಯರು ಬಹಿರಂಗವಾಗಿಯೇ ಖಂಡಿಸಿದರು. ನಗರ ಪಂಚಾಯತ್ ಕೊಳಚೆ ವಿಚಾರದಲ್ಲಿ ಸುದೀರ್ಘವಾಗಿ ಮಾತನಾಡಿದಾಗಲೂ ಬಿಜೆಪಿ ಸದಸ್ಯರೊಬ್ಬರು ಅಸಹಿಷ್ಣುತೆ ವ್ಯಕ್ತಪಡಿಸಿದರು.

ವಿವರ ಹೀಗಿದೆ…..

ಸಭೆ ಆರಂಭಗೊಂಡು ಪಾಲನಾ ವರದಿ ಚರ್ಚೆ ಆರಂಭಿಸಿದಾಗ “ಮೊದಲು ಸ್ಥಾಯಿ ಸಮಿತಿಯ ಲೆಕ್ಕಪತ್ರ ಮತ್ತು ಪಾಲನಾ ವರದಿ ಮಂಡಿಸಿ ಬಳಿಕ ತಾ.ಪಂ. ಪಾಲನಾ ವರದಿ ಕುರಿತು ಚರ್ಚೆ ನಡೆಯಬೇಕು ಎಂಬುದು ಕಾನೂನು. ಹಾಗೆ ಮಾಡಬೇಕು” ಎಂದು ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿಜೆಪಿ ಸದಸ್ಯ ರಾಧಾಕೃಷ್ಣ ಬೊಳ್ಳೂರು ಪಟ್ಟು ಹಿಡಿದರು.

ಇದಕ್ಕೆ ಉತ್ತರಿಸಿದ ಅಧ್ಯಕ್ಷ ಚನಿಯ ಕಲ್ತಡ್ಕ “ಈ ತಾಲೂಕು ಪಂಚಾಯತ್ ಆರಂಭದಿಂದಲೂ ಇದೇ ರೀತಿಯ ನಡವಳಿ ಮುಂದುವರಿಯುತ್ತಾ ಬಂದಿದೆ. ಕಾನೂನು ಹಾಗಿದ್ದರೆ ನೀವು ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದಾಗ ಯಾಕೆ ಕಾನೂನು ಪಾಲನೆ ಮಾಡಲಿಲ್ಲ” ಎಂದು ರಾಧಾಕೃಷ್ಣ ಬೊಳ್ಳೂರು ಅವರನ್ನು ಪ್ರಶ್ನಿಸಿದರು. ಅಧ್ಯಕ್ಷರ ಉತ್ತರಕ್ಕೆ ಬಿಜೆಪಿಯ ಇತರ ಸದಸ್ಯರು ಧ್ವನಿಗೂಡಿಸಿದರು.

ನಗರ ಪಂಚಾಯತ್ ಕೊಳಚೆ ವಿಚಾರದಲ್ಲಿ ರಾಧಾಕೃಷ್ಣ ಬೊಳ್ಳೂರು ಸುದೀರ್ಘ ಚರ್ಚೆ ನಡೆಸಿದಾಗ ಅಸಹಿಷ್ಣುತೆ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ಉದಯ ಕೊಪ್ಪಡ್ಕ ನಗರ ಪಂಚಾಯತ್ ಕೊಳಚೆ ಒಂದು ವಿಷಯವನ್ನು ಮಾತ್ರ ಅಸ್ಟು ದೀರ್ಘ ಚರ್ಚೆ ಮಾಡಿದರೆ ಹೇಗೆ, ನಮಗೆ ಬೇರೆ ವಿಚಾರ ಚರ್ಚೆ ಮಾಡಲು ಇದೆ ಎಂದು ಹೇಳಿದ ಘಟನೆಗೂ ಸಭೆ ಸಾಕ್ಷಿಯಾಯಿತು.

ಅಧಿಕಾರಿಗಳು ಗೈರು- ಒಂದು ಗಂಟೆ ತಡವಾಗಿ ಸಭೆ ಆರಂಭ:

ತಾ.ಪಂ.ಸಭೆಗೆ ಅಧಿಕಾರಿಗಳು ಗೈರಾದ ಕಾರಣ ತಾ.ಪಂ.ಸಾಮಾನ್ಯ ಸಭೆ ಸುಮಾರು ಒಂದು ಗಂಟೆ ತಡವಾಗಿ ಆರಂಭವಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿರಲಿಲ್ಲ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸದಸ್ಯರು ಅಧಿಕಾರಿಗಳು ಇಲ್ಲದೆ ಸಭೆ ನಡೆಸುವುದು ಬೇಡ. ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಬೇಕು ಎಂದು ಸದಸ್ಯರು ಒತ್ತಾಯಿಸಿದರು. ಬಳಿಕ ಕೆಲವು ಅಧಿಕಾರಿಗಳು ಆಗಮಿಸಿದ ಬಳಿಕ ಒಂದು ಗಂಟೆಗೂ ಹೆಚ್ಚು ಸಮಯ ತಡವಾಗಿ ಸಭೆ ಆರಂಭಗೊಂಡಿತು.

ಕಳೆದ ಕೆಲವು ಸಮಯಗಳಿಂದ ಸುಳ್ಯದ ಹಲವು ಸಭೆಗಳು ಇದೇ ಮಾದರಿಯಲ್ಲಿ ನಡೆಯುತ್ತಿದೆ. ಸಭೆ ನಡೆಸಿದ ಬಳಿಕ ಫಾಲೋ ಅಪ್ ಇಲ್ಲದೇ ಇರುವುದು ಕಂಡುಬಂದರೆ. ಅಧಿಕಾರಿಗಳಿಗೂ ಸಭೆಯ ಬಗ್ಗೆ ಗಂಭೀರತೆ ಇಲ್ಲದೇ ಇರುವುದು  ಕಂಡುಬಂದಿದೆ.  ಸಭೆಯಲ್ಲಿ ಕೇಳುವ ಪ್ರಶ್ನೆಗೆ ಮಾಡಲಾಗಿದೆ, ತಿಳಿಸಲಾಗಿದೆ ಎಂಬ ವರದಿಯೊಂದಿಗೆ ಸಭೆ ಮುಕ್ತಾಯವಾಗುವುದು ಕಂಡುಬರುತ್ತಿದೆ. ಸುಳ್ಯದ ಪ್ರಮುಖವಾದ ವಿದ್ಯುತ್ ಸಮಸ್ಯೆ , ಕುಡಿಯುವ ನೀರಿನ ಸಮಸ್ಯೆ, ರಸ್ತೆ ಸಮಸ್ಯೆಯ ಬಗ್ಗೆ ಇದುವರೆಗೆ ನಡೆದ ಬಹುತೇಕ ಸಭೆಗಳೂ ಫಲ ನೀಡದೇ  ಇರುವುದು  ಕಂಡುಬಂದಿದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

2 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

8 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

17 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

20 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago