Advertisement
ಸುದ್ದಿಗಳು

ಸುಳ್ಯ ತಾಪಂ ಸಭೆ : ಆಡಳಿತ ಪಕ್ಷದ ಸದಸ್ಯರ ನಡುವಿನ ಭಿನ್ನಾಭಿಪ್ರಾಯ ಸಭೆಯಲ್ಲೇ ಬಹಿರಂಗ…!

Share

ಸುಳ್ಯ:  ಸುಳ್ಯ ತಾಲೂಕು ಪಂಚಾಯತ್ ಸಾಮಾನ್ಯ ಸಭೆ  ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಈ ಬಾರಿಯ ಸಭೆಯಲ್ಲಿ ಆಡಳಿತ ಪಕ್ಷದ  ಸದಸ್ಯರ ನಡುವಿನ ಭಿನ್ನಾಭಿಪ್ರಾಯ ಸಭೆಯಲ್ಲಿ ಬಹಿರಂಗಗೊಂಡಿದೆ.

ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿಜೆಪಿ ಸದಸ್ಯ ರಾಧಾಕೃಷ್ಣ ಬೊಳ್ಳೂರು  ಅವರ ನಿಲುವನ್ನು ತಾಪಂ ಅಧ್ಯಕ್ಷ ಹಾಗೂ ಬಿಜೆಪಿ ಸದಸ್ಯರು ಬಹಿರಂಗವಾಗಿಯೇ ಖಂಡಿಸಿದರು. ನಗರ ಪಂಚಾಯತ್ ಕೊಳಚೆ ವಿಚಾರದಲ್ಲಿ ಸುದೀರ್ಘವಾಗಿ ಮಾತನಾಡಿದಾಗಲೂ ಬಿಜೆಪಿ ಸದಸ್ಯರೊಬ್ಬರು ಅಸಹಿಷ್ಣುತೆ ವ್ಯಕ್ತಪಡಿಸಿದರು.

ವಿವರ ಹೀಗಿದೆ…..

ಸಭೆ ಆರಂಭಗೊಂಡು ಪಾಲನಾ ವರದಿ ಚರ್ಚೆ ಆರಂಭಿಸಿದಾಗ “ಮೊದಲು ಸ್ಥಾಯಿ ಸಮಿತಿಯ ಲೆಕ್ಕಪತ್ರ ಮತ್ತು ಪಾಲನಾ ವರದಿ ಮಂಡಿಸಿ ಬಳಿಕ ತಾ.ಪಂ. ಪಾಲನಾ ವರದಿ ಕುರಿತು ಚರ್ಚೆ ನಡೆಯಬೇಕು ಎಂಬುದು ಕಾನೂನು. ಹಾಗೆ ಮಾಡಬೇಕು” ಎಂದು ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿಜೆಪಿ ಸದಸ್ಯ ರಾಧಾಕೃಷ್ಣ ಬೊಳ್ಳೂರು ಪಟ್ಟು ಹಿಡಿದರು.

ಇದಕ್ಕೆ ಉತ್ತರಿಸಿದ ಅಧ್ಯಕ್ಷ ಚನಿಯ ಕಲ್ತಡ್ಕ “ಈ ತಾಲೂಕು ಪಂಚಾಯತ್ ಆರಂಭದಿಂದಲೂ ಇದೇ ರೀತಿಯ ನಡವಳಿ ಮುಂದುವರಿಯುತ್ತಾ ಬಂದಿದೆ. ಕಾನೂನು ಹಾಗಿದ್ದರೆ ನೀವು ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದಾಗ ಯಾಕೆ ಕಾನೂನು ಪಾಲನೆ ಮಾಡಲಿಲ್ಲ” ಎಂದು ರಾಧಾಕೃಷ್ಣ ಬೊಳ್ಳೂರು ಅವರನ್ನು ಪ್ರಶ್ನಿಸಿದರು. ಅಧ್ಯಕ್ಷರ ಉತ್ತರಕ್ಕೆ ಬಿಜೆಪಿಯ ಇತರ ಸದಸ್ಯರು ಧ್ವನಿಗೂಡಿಸಿದರು.

ನಗರ ಪಂಚಾಯತ್ ಕೊಳಚೆ ವಿಚಾರದಲ್ಲಿ ರಾಧಾಕೃಷ್ಣ ಬೊಳ್ಳೂರು ಸುದೀರ್ಘ ಚರ್ಚೆ ನಡೆಸಿದಾಗ ಅಸಹಿಷ್ಣುತೆ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ಉದಯ ಕೊಪ್ಪಡ್ಕ ನಗರ ಪಂಚಾಯತ್ ಕೊಳಚೆ ಒಂದು ವಿಷಯವನ್ನು ಮಾತ್ರ ಅಸ್ಟು ದೀರ್ಘ ಚರ್ಚೆ ಮಾಡಿದರೆ ಹೇಗೆ, ನಮಗೆ ಬೇರೆ ವಿಚಾರ ಚರ್ಚೆ ಮಾಡಲು ಇದೆ ಎಂದು ಹೇಳಿದ ಘಟನೆಗೂ ಸಭೆ ಸಾಕ್ಷಿಯಾಯಿತು.

ಅಧಿಕಾರಿಗಳು ಗೈರು- ಒಂದು ಗಂಟೆ ತಡವಾಗಿ ಸಭೆ ಆರಂಭ:

ತಾ.ಪಂ.ಸಭೆಗೆ ಅಧಿಕಾರಿಗಳು ಗೈರಾದ ಕಾರಣ ತಾ.ಪಂ.ಸಾಮಾನ್ಯ ಸಭೆ ಸುಮಾರು ಒಂದು ಗಂಟೆ ತಡವಾಗಿ ಆರಂಭವಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿರಲಿಲ್ಲ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸದಸ್ಯರು ಅಧಿಕಾರಿಗಳು ಇಲ್ಲದೆ ಸಭೆ ನಡೆಸುವುದು ಬೇಡ. ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಬೇಕು ಎಂದು ಸದಸ್ಯರು ಒತ್ತಾಯಿಸಿದರು. ಬಳಿಕ ಕೆಲವು ಅಧಿಕಾರಿಗಳು ಆಗಮಿಸಿದ ಬಳಿಕ ಒಂದು ಗಂಟೆಗೂ ಹೆಚ್ಚು ಸಮಯ ತಡವಾಗಿ ಸಭೆ ಆರಂಭಗೊಂಡಿತು.

ಕಳೆದ ಕೆಲವು ಸಮಯಗಳಿಂದ ಸುಳ್ಯದ ಹಲವು ಸಭೆಗಳು ಇದೇ ಮಾದರಿಯಲ್ಲಿ ನಡೆಯುತ್ತಿದೆ. ಸಭೆ ನಡೆಸಿದ ಬಳಿಕ ಫಾಲೋ ಅಪ್ ಇಲ್ಲದೇ ಇರುವುದು ಕಂಡುಬಂದರೆ. ಅಧಿಕಾರಿಗಳಿಗೂ ಸಭೆಯ ಬಗ್ಗೆ ಗಂಭೀರತೆ ಇಲ್ಲದೇ ಇರುವುದು  ಕಂಡುಬಂದಿದೆ.  ಸಭೆಯಲ್ಲಿ ಕೇಳುವ ಪ್ರಶ್ನೆಗೆ ಮಾಡಲಾಗಿದೆ, ತಿಳಿಸಲಾಗಿದೆ ಎಂಬ ವರದಿಯೊಂದಿಗೆ ಸಭೆ ಮುಕ್ತಾಯವಾಗುವುದು ಕಂಡುಬರುತ್ತಿದೆ. ಸುಳ್ಯದ ಪ್ರಮುಖವಾದ ವಿದ್ಯುತ್ ಸಮಸ್ಯೆ , ಕುಡಿಯುವ ನೀರಿನ ಸಮಸ್ಯೆ, ರಸ್ತೆ ಸಮಸ್ಯೆಯ ಬಗ್ಗೆ ಇದುವರೆಗೆ ನಡೆದ ಬಹುತೇಕ ಸಭೆಗಳೂ ಫಲ ನೀಡದೇ  ಇರುವುದು  ಕಂಡುಬಂದಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

6 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

7 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

8 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago