ಸುಳ್ಯ ತಾಲೂಕಿನಲ್ಲಿ ಒಂದು ವರ್ಷದಲ್ಲಿ ಅಪಘಾತದಲ್ಲಿ 35 ಸಾವು….!

January 14, 2020
7:37 AM

ಸುಳ್ಯ: ಸುಳ್ಯ ಪೊಲೀಸ್ ಠಾಣೆಯ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಯಿತು. ರಸ್ತೆ ಸುರಕ್ಷೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

Advertisement

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಸ್.ಅಂಗಾರ ರಸ್ತೆಯಲ್ಲಿ ಪ್ರಯಾಣಿಸುವಾಗ ಜನರು ಅತ್ಯಂತ ಜಾಗೃತರಾಗಿದ್ದು ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಅಪಘಾತಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಸ್ತೆಯಲ್ಲಿನ ಅಪಾಯಕಾರಿ ತಿರುವು, ದಿಬ್ಬಗಳನ್ನು ಸರಿಪಡಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದರು. ಸುಳ್ಯಕ್ಕೆ ಮಂಜೂರಾದ ಹೈವೇ ಪಟ್ರೋಲ್ ವಾಹನವನ್ನು ಶಾಸಕ ಅಂಗಾರ ಈ ಸಂದರ್ಭದಲ್ಲಿ ಉದ್ಘಾಟಿಸಿದರು.

ಒಂದು ವರ್ಷದಲ್ಲಿ ಅಪಘಾತದಲ್ಲಿ 35 ಸಾವು:

ಪ್ರಾಸ್ತಾವಿಕವಾಗಿ ಮಾತನಾಡಿದ ಸುಳ್ಯ ವೃತ್ತ ನಿರೀಕ್ಷಕ ನವೀನ್‍ಚಂದ್ರ ಜೋಗಿ ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕಾಗಿದೆ. ಮಾನವ ಜೀವಗಳು ರಸ್ತೆಯಲ್ಲಿ ಬಲಿಯಾಗುವುದನ್ನು ತಪ್ಪಿಸಲು ಎಲ್ಲರೂ ಕೈಜೋಡಸಬೇಕು ಎಂದರು. ಸುಳ್ಯ ತಾಲೂಕಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 100 ಅಪಘಾತ ಪ್ರಕರಣಗಳು ದಾಖಲಾಗಿದ್ದು 35 ಮಂದಿ ಮೃತಪಟ್ಟಿದ್ದಾರೆ ಮತ್ತು 96 ಮಂದಿ ಗಾಯಗೊಂಡಿದ್ದಾರೆ. ರಸ್ತೆ ಸುರಕ್ಷತೆಯ ಬಗ್ಗೆ ಎಲ್ಲರೂ ಗಂಭೀರವಾಗಿ ಯೋಚಿಸಬೇಕಾಗಿದೆ ಎಂದರು.

Advertisement

ಸುಳ್ಯ ಎಸ್‍ಐ ಎಂ.ಆರ್.ಹರೀಶ್, ಕ್ರೈಂ ಎಸ್‍ಐ ರತ್ನಕುಮಾರ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ಜಾಗೃತಿ ಜಾಥಾದಲ್ಲಿ ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕರಾದ ನಟರಾಜ್, ಭವಾನಿ, ಜಯಲತ, ರಮ್ಯ, ವಿನೋದ್ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ
August 17, 2025
2:33 PM
by: ಸಾಯಿಶೇಖರ್ ಕರಿಕಳ
ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ
August 17, 2025
6:52 AM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ, ಮಲೆನಾಡು ಭಾರೀ ಮಳೆ ಸಂಭವ | ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
August 17, 2025
6:49 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?
August 16, 2025
3:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group