ಸುದ್ದಿಗಳು

ಸುಳ್ಯ ತಾಲೂಕಿನಲ್ಲಿ ನೆಮ್ಮದಿ | 54 ಮಂದಿಗೂ ಕೊರೊನಾ ನೆಗೆಟಿವ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ತಾಲೂಕಿನಲ್ಲಿ  ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಕೊರೊನಾ ವೈರಸ್ ಸಂಬಂಧವಾಗಿ ತಾಲೂಕಿನಲ್ಲಿ  54 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಅವರೆಲ್ಲರದ್ದೂ ನೆಗೆಟಿವ್ ವರದಿ ಬಂದಿದೆ.

Advertisement

ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಬಂದಿದ್ದ ಸುಬ್ರಹ್ಮಣ್ಯ ಬಳಿಯ ವ್ಯಕ್ತಿಯೊಬ್ಬರನ್ನು ಹಾಗೂ ಅವರ ಮನೆಯವರನ್ನು  ಮತ್ತು  ಅವರನ್ನು ಮಾತನಾಡಲು ಹೋಗಿದ್ದ ಗುತ್ತಿಗಾರು ಗ್ರಾಮದ ಕಮಿಲದ ಕುಟುಂಬ, ಪೆರಾಜೆಯ ಕುಟುಂಬವನ್ನು  ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅವರೆಲ್ಲರ ಪರೀಕ್ಷಾ ವರದಿಗಳೂ ಸೇರಿದಂತೆ ತಾಲೂಕಿನ ಇದುವರೆಗಿನ ಎಲ್ಲಾ ಪರೀಕ್ಷಾ ವರದಿಗಳೂ ನೆಗೆಟಿವ್ ಬಂದಿದ್ದು ಯಾವುದೇ ಆತಂಕವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕ್ವಾರಂಟೈನ್ ಗೆ ಒಳಗಾದವರನ್ನು ಕೊರೊನಾ ಸೋಂಕು ಬಾಧಿಸಿದೆ ಎಂಬ ರೀತಿಯಲ್ಲಿ  ಕೆಲವು ಮಂದಿ ನೋಡಿದ್ದಾರೆ ಹಾಗೂ ಕೆಲವು ಮಂದಿ ಕೊರೊನಾ ವೈರಸ್ ಬಾಧಿಸಿದೆ ಎಂದೇ ಅಪಪ್ರಚಾರ ಮಾಡಿದ್ದಾರೆ ಎಂದು ಕ್ವಾರಂಟೈನ್ ಒಳಗಾದವರು ನೋವು ತೋಡಿಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ಗೆ ಒಳಗಾಗಿ ಇದೀಗ ಕೊರೊನಾ ನೆಗೆಟಿವ್ ವರದಿ ಬಂದಿರುವುದು  ಯಾವುದೇ ಆತಂಕವಿಲ್ಲದಾಗಿದೆ. ಅನಗತ್ಯವಾಗಿ ಯಾರೊಬ್ಬರೂ ಅಪಪ್ರಚಾರ ಮಾಡಬಾರದು ಎಂದು ಕ್ವಾರಂಟೈನ್ ಗೆ ಒಳಗಾದವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

1 hour ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

4 hours ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

17 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

18 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago