ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾನಿಯಾಗದಂತೆ ತಡೆಯುವುದು ಹಾಗೂ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳು ಚಿತ್ತ ಹರಿಸಿದ್ದಾರೆ. ಕಡಬ ತಹಶೀಲ್ದಾರ್ ಅವರು ಕೂಡಾ ವಿವಿದೆಡೆ ಭೇಟಿ ನೀಡಿದ್ದ ಸುಬ್ರಹ್ಮಣ್ಯ ಸ್ನಾನ ಘಟ್ಟ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿದರು.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಡೆಯಾದರೆ ಸುಳ್ಯದ ಕೇರ್ಪಳದಲ್ಲಿ ಕಂಪೌಂಡ್ ಗೋಡೆ ಕುಸಿತವಾಗಿದೆ. ಬೆಳ್ಳಾರೆ ರಸ್ತೆಯಲ್ಲಿ ನೀರು ಹರಿದು ತಗ್ಗು ಪ್ರದೇಶದಲ್ಲಿ ನೀರು ಶೇಖರಣೆಗೊಂಡು ಸಂಕಷ್ಟ ತಂದಿದೆ. ಬಳ್ಳಕ್ಕ ಗುತ್ತಿಗಾರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸುಳ್ಯದ ಜಟ್ಟಿಪಳ್ಳ, ಹಳೆಗೇಟು ಬಳಿಯೂ ನೀರು ಹರಿದು ಸಂಕಷ್ಟವಾಗಿದೆ.
ತಹಶೀಲ್ದಾರ್ ಭೇಟಿ:
ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರು ವಿವಿಧ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲೂಕಿನ ಎಲ್ಲಾ ಅಧಿಕಾರಿ ಎಲರ್ಟ್ ಆಗಿರಲು ಸೂಚಿಸಿದರು. ಅಗತ್ಯಬಿದ್ದರೆ ಗಂಜಿ ಕೇಂದ್ರ ತೆರಯಲೂ ಸಿದ್ಧತೆ ನಡೆಸುವಂತೆ ಸೂಚಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…