ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾನಿಯಾಗದಂತೆ ತಡೆಯುವುದು ಹಾಗೂ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳು ಚಿತ್ತ ಹರಿಸಿದ್ದಾರೆ. ಕಡಬ ತಹಶೀಲ್ದಾರ್ ಅವರು ಕೂಡಾ ವಿವಿದೆಡೆ ಭೇಟಿ ನೀಡಿದ್ದ ಸುಬ್ರಹ್ಮಣ್ಯ ಸ್ನಾನ ಘಟ್ಟ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿದರು.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಡೆಯಾದರೆ ಸುಳ್ಯದ ಕೇರ್ಪಳದಲ್ಲಿ ಕಂಪೌಂಡ್ ಗೋಡೆ ಕುಸಿತವಾಗಿದೆ. ಬೆಳ್ಳಾರೆ ರಸ್ತೆಯಲ್ಲಿ ನೀರು ಹರಿದು ತಗ್ಗು ಪ್ರದೇಶದಲ್ಲಿ ನೀರು ಶೇಖರಣೆಗೊಂಡು ಸಂಕಷ್ಟ ತಂದಿದೆ. ಬಳ್ಳಕ್ಕ ಗುತ್ತಿಗಾರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸುಳ್ಯದ ಜಟ್ಟಿಪಳ್ಳ, ಹಳೆಗೇಟು ಬಳಿಯೂ ನೀರು ಹರಿದು ಸಂಕಷ್ಟವಾಗಿದೆ.
ತಹಶೀಲ್ದಾರ್ ಭೇಟಿ:
ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರು ವಿವಿಧ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲೂಕಿನ ಎಲ್ಲಾ ಅಧಿಕಾರಿ ಎಲರ್ಟ್ ಆಗಿರಲು ಸೂಚಿಸಿದರು. ಅಗತ್ಯಬಿದ್ದರೆ ಗಂಜಿ ಕೇಂದ್ರ ತೆರಯಲೂ ಸಿದ್ಧತೆ ನಡೆಸುವಂತೆ ಸೂಚಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…