ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾನಿಯಾಗದಂತೆ ತಡೆಯುವುದು ಹಾಗೂ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳು ಚಿತ್ತ ಹರಿಸಿದ್ದಾರೆ. ಕಡಬ ತಹಶೀಲ್ದಾರ್ ಅವರು ಕೂಡಾ ವಿವಿದೆಡೆ ಭೇಟಿ ನೀಡಿದ್ದ ಸುಬ್ರಹ್ಮಣ್ಯ ಸ್ನಾನ ಘಟ್ಟ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿದರು.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಡೆಯಾದರೆ ಸುಳ್ಯದ ಕೇರ್ಪಳದಲ್ಲಿ ಕಂಪೌಂಡ್ ಗೋಡೆ ಕುಸಿತವಾಗಿದೆ. ಬೆಳ್ಳಾರೆ ರಸ್ತೆಯಲ್ಲಿ ನೀರು ಹರಿದು ತಗ್ಗು ಪ್ರದೇಶದಲ್ಲಿ ನೀರು ಶೇಖರಣೆಗೊಂಡು ಸಂಕಷ್ಟ ತಂದಿದೆ. ಬಳ್ಳಕ್ಕ ಗುತ್ತಿಗಾರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸುಳ್ಯದ ಜಟ್ಟಿಪಳ್ಳ, ಹಳೆಗೇಟು ಬಳಿಯೂ ನೀರು ಹರಿದು ಸಂಕಷ್ಟವಾಗಿದೆ.
ತಹಶೀಲ್ದಾರ್ ಭೇಟಿ:
ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರು ವಿವಿಧ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲೂಕಿನ ಎಲ್ಲಾ ಅಧಿಕಾರಿ ಎಲರ್ಟ್ ಆಗಿರಲು ಸೂಚಿಸಿದರು. ಅಗತ್ಯಬಿದ್ದರೆ ಗಂಜಿ ಕೇಂದ್ರ ತೆರಯಲೂ ಸಿದ್ಧತೆ ನಡೆಸುವಂತೆ ಸೂಚಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…
ಶಿವಮೊಗ್ಗ ಜಿಲ್ಲೆಯ ಸಾಗರದ ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ ವಿವಿಧೋದ್ದೇಶ…
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…