ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾನಿಯಾಗದಂತೆ ತಡೆಯುವುದು ಹಾಗೂ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳು ಚಿತ್ತ ಹರಿಸಿದ್ದಾರೆ. ಕಡಬ ತಹಶೀಲ್ದಾರ್ ಅವರು ಕೂಡಾ ವಿವಿದೆಡೆ ಭೇಟಿ ನೀಡಿದ್ದ ಸುಬ್ರಹ್ಮಣ್ಯ ಸ್ನಾನ ಘಟ್ಟ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿದರು.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಡೆಯಾದರೆ ಸುಳ್ಯದ ಕೇರ್ಪಳದಲ್ಲಿ ಕಂಪೌಂಡ್ ಗೋಡೆ ಕುಸಿತವಾಗಿದೆ. ಬೆಳ್ಳಾರೆ ರಸ್ತೆಯಲ್ಲಿ ನೀರು ಹರಿದು ತಗ್ಗು ಪ್ರದೇಶದಲ್ಲಿ ನೀರು ಶೇಖರಣೆಗೊಂಡು ಸಂಕಷ್ಟ ತಂದಿದೆ. ಬಳ್ಳಕ್ಕ ಗುತ್ತಿಗಾರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸುಳ್ಯದ ಜಟ್ಟಿಪಳ್ಳ, ಹಳೆಗೇಟು ಬಳಿಯೂ ನೀರು ಹರಿದು ಸಂಕಷ್ಟವಾಗಿದೆ.
ತಹಶೀಲ್ದಾರ್ ಭೇಟಿ:
ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರು ವಿವಿಧ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲೂಕಿನ ಎಲ್ಲಾ ಅಧಿಕಾರಿ ಎಲರ್ಟ್ ಆಗಿರಲು ಸೂಚಿಸಿದರು. ಅಗತ್ಯಬಿದ್ದರೆ ಗಂಜಿ ಕೇಂದ್ರ ತೆರಯಲೂ ಸಿದ್ಧತೆ ನಡೆಸುವಂತೆ ಸೂಚಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…