ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾನಿಯಾಗದಂತೆ ತಡೆಯುವುದು ಹಾಗೂ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳು ಚಿತ್ತ ಹರಿಸಿದ್ದಾರೆ. ಕಡಬ ತಹಶೀಲ್ದಾರ್ ಅವರು ಕೂಡಾ ವಿವಿದೆಡೆ ಭೇಟಿ ನೀಡಿದ್ದ ಸುಬ್ರಹ್ಮಣ್ಯ ಸ್ನಾನ ಘಟ್ಟ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿದರು.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಡೆಯಾದರೆ ಸುಳ್ಯದ ಕೇರ್ಪಳದಲ್ಲಿ ಕಂಪೌಂಡ್ ಗೋಡೆ ಕುಸಿತವಾಗಿದೆ. ಬೆಳ್ಳಾರೆ ರಸ್ತೆಯಲ್ಲಿ ನೀರು ಹರಿದು ತಗ್ಗು ಪ್ರದೇಶದಲ್ಲಿ ನೀರು ಶೇಖರಣೆಗೊಂಡು ಸಂಕಷ್ಟ ತಂದಿದೆ. ಬಳ್ಳಕ್ಕ ಗುತ್ತಿಗಾರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸುಳ್ಯದ ಜಟ್ಟಿಪಳ್ಳ, ಹಳೆಗೇಟು ಬಳಿಯೂ ನೀರು ಹರಿದು ಸಂಕಷ್ಟವಾಗಿದೆ.
ತಹಶೀಲ್ದಾರ್ ಭೇಟಿ:
ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರು ವಿವಿಧ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲೂಕಿನ ಎಲ್ಲಾ ಅಧಿಕಾರಿ ಎಲರ್ಟ್ ಆಗಿರಲು ಸೂಚಿಸಿದರು. ಅಗತ್ಯಬಿದ್ದರೆ ಗಂಜಿ ಕೇಂದ್ರ ತೆರಯಲೂ ಸಿದ್ಧತೆ ನಡೆಸುವಂತೆ ಸೂಚಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…