Advertisement
ಸುದ್ದಿಗಳು

ಸುಳ್ಯ ತಾಲೂಕಿನಲ್ಲಿ ಮಳೆಯಬ್ಬರ : ಹಾನಿ ತಡೆಗೆ ಅಧಿಕಾರಿಗಳ ಚಿತ್ತ

Share

ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾನಿಯಾಗದಂತೆ ತಡೆಯುವುದು  ಹಾಗೂ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳು ಚಿತ್ತ ಹರಿಸಿದ್ದಾರೆ. ಕಡಬ ತಹಶೀಲ್ದಾರ್ ಅವರು ಕೂಡಾ ವಿವಿದೆಡೆ ಭೇಟಿ ನೀಡಿದ್ದ ಸುಬ್ರಹ್ಮಣ್ಯ ಸ್ನಾನ ಘಟ್ಟ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿದರು.

ಕಡಬ ತಾಲೂಕಿನ  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಡೆಯಾದರೆ ಸುಳ್ಯದ ಕೇರ್ಪಳದಲ್ಲಿ ಕಂಪೌಂಡ್ ಗೋಡೆ ಕುಸಿತವಾಗಿದೆ. ಬೆಳ್ಳಾರೆ ರಸ್ತೆಯಲ್ಲಿ  ನೀರು ಹರಿದು ತಗ್ಗು ಪ್ರದೇಶದಲ್ಲಿ ನೀರು ಶೇಖರಣೆಗೊಂಡು ಸಂಕಷ್ಟ ತಂದಿದೆ. ಬಳ್ಳಕ್ಕ ಗುತ್ತಿಗಾರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸುಳ್ಯದ ಜಟ್ಟಿಪಳ್ಳ, ಹಳೆಗೇಟು ಬಳಿಯೂ ನೀರು ಹರಿದು ಸಂಕಷ್ಟವಾಗಿದೆ.

 

ಸುಳ್ಯದ ಹಳೆಗೇಟು ಬಳಿಯ ಪರಿಸ್ಥಿತಿ

 

ತಹಶೀಲ್ದಾರ್ ಭೇಟಿ:

ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರು ವಿವಿಧ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲೂಕಿನ ಎಲ್ಲಾ ಅಧಿಕಾರಿ ಎಲರ್ಟ್ ಆಗಿರಲು ಸೂಚಿಸಿದರು. ಅಗತ್ಯಬಿದ್ದರೆ ಗಂಜಿ ಕೇಂದ್ರ ತೆರಯಲೂ ಸಿದ್ಧತೆ ನಡೆಸುವಂತೆ ಸೂಚಿಸಿದರು.

ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ  ಸೂಚನೆ ನೀಡಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

1 minute ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

20 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago