ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾನಿಯಾಗದಂತೆ ತಡೆಯುವುದು ಹಾಗೂ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳು ಚಿತ್ತ ಹರಿಸಿದ್ದಾರೆ. ಕಡಬ ತಹಶೀಲ್ದಾರ್ ಅವರು ಕೂಡಾ ವಿವಿದೆಡೆ ಭೇಟಿ ನೀಡಿದ್ದ ಸುಬ್ರಹ್ಮಣ್ಯ ಸ್ನಾನ ಘಟ್ಟ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿದರು.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಡೆಯಾದರೆ ಸುಳ್ಯದ ಕೇರ್ಪಳದಲ್ಲಿ ಕಂಪೌಂಡ್ ಗೋಡೆ ಕುಸಿತವಾಗಿದೆ. ಬೆಳ್ಳಾರೆ ರಸ್ತೆಯಲ್ಲಿ ನೀರು ಹರಿದು ತಗ್ಗು ಪ್ರದೇಶದಲ್ಲಿ ನೀರು ಶೇಖರಣೆಗೊಂಡು ಸಂಕಷ್ಟ ತಂದಿದೆ. ಬಳ್ಳಕ್ಕ ಗುತ್ತಿಗಾರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸುಳ್ಯದ ಜಟ್ಟಿಪಳ್ಳ, ಹಳೆಗೇಟು ಬಳಿಯೂ ನೀರು ಹರಿದು ಸಂಕಷ್ಟವಾಗಿದೆ.
ತಹಶೀಲ್ದಾರ್ ಭೇಟಿ:
ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರು ವಿವಿಧ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲೂಕಿನ ಎಲ್ಲಾ ಅಧಿಕಾರಿ ಎಲರ್ಟ್ ಆಗಿರಲು ಸೂಚಿಸಿದರು. ಅಗತ್ಯಬಿದ್ದರೆ ಗಂಜಿ ಕೇಂದ್ರ ತೆರಯಲೂ ಸಿದ್ಧತೆ ನಡೆಸುವಂತೆ ಸೂಚಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…