ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾನಿಯಾಗದಂತೆ ತಡೆಯುವುದು ಹಾಗೂ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳು ಚಿತ್ತ ಹರಿಸಿದ್ದಾರೆ. ಕಡಬ ತಹಶೀಲ್ದಾರ್ ಅವರು ಕೂಡಾ ವಿವಿದೆಡೆ ಭೇಟಿ ನೀಡಿದ್ದ ಸುಬ್ರಹ್ಮಣ್ಯ ಸ್ನಾನ ಘಟ್ಟ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿದರು.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಡೆಯಾದರೆ ಸುಳ್ಯದ ಕೇರ್ಪಳದಲ್ಲಿ ಕಂಪೌಂಡ್ ಗೋಡೆ ಕುಸಿತವಾಗಿದೆ. ಬೆಳ್ಳಾರೆ ರಸ್ತೆಯಲ್ಲಿ ನೀರು ಹರಿದು ತಗ್ಗು ಪ್ರದೇಶದಲ್ಲಿ ನೀರು ಶೇಖರಣೆಗೊಂಡು ಸಂಕಷ್ಟ ತಂದಿದೆ. ಬಳ್ಳಕ್ಕ ಗುತ್ತಿಗಾರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸುಳ್ಯದ ಜಟ್ಟಿಪಳ್ಳ, ಹಳೆಗೇಟು ಬಳಿಯೂ ನೀರು ಹರಿದು ಸಂಕಷ್ಟವಾಗಿದೆ.
ತಹಶೀಲ್ದಾರ್ ಭೇಟಿ:
ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರು ವಿವಿಧ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲೂಕಿನ ಎಲ್ಲಾ ಅಧಿಕಾರಿ ಎಲರ್ಟ್ ಆಗಿರಲು ಸೂಚಿಸಿದರು. ಅಗತ್ಯಬಿದ್ದರೆ ಗಂಜಿ ಕೇಂದ್ರ ತೆರಯಲೂ ಸಿದ್ಧತೆ ನಡೆಸುವಂತೆ ಸೂಚಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…