ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾನಿಯಾಗದಂತೆ ತಡೆಯುವುದು ಹಾಗೂ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳು ಚಿತ್ತ ಹರಿಸಿದ್ದಾರೆ. ಕಡಬ ತಹಶೀಲ್ದಾರ್ ಅವರು ಕೂಡಾ ವಿವಿದೆಡೆ ಭೇಟಿ ನೀಡಿದ್ದ ಸುಬ್ರಹ್ಮಣ್ಯ ಸ್ನಾನ ಘಟ್ಟ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿದರು.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಡೆಯಾದರೆ ಸುಳ್ಯದ ಕೇರ್ಪಳದಲ್ಲಿ ಕಂಪೌಂಡ್ ಗೋಡೆ ಕುಸಿತವಾಗಿದೆ. ಬೆಳ್ಳಾರೆ ರಸ್ತೆಯಲ್ಲಿ ನೀರು ಹರಿದು ತಗ್ಗು ಪ್ರದೇಶದಲ್ಲಿ ನೀರು ಶೇಖರಣೆಗೊಂಡು ಸಂಕಷ್ಟ ತಂದಿದೆ. ಬಳ್ಳಕ್ಕ ಗುತ್ತಿಗಾರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸುಳ್ಯದ ಜಟ್ಟಿಪಳ್ಳ, ಹಳೆಗೇಟು ಬಳಿಯೂ ನೀರು ಹರಿದು ಸಂಕಷ್ಟವಾಗಿದೆ.
ತಹಶೀಲ್ದಾರ್ ಭೇಟಿ:
ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರು ವಿವಿಧ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲೂಕಿನ ಎಲ್ಲಾ ಅಧಿಕಾರಿ ಎಲರ್ಟ್ ಆಗಿರಲು ಸೂಚಿಸಿದರು. ಅಗತ್ಯಬಿದ್ದರೆ ಗಂಜಿ ಕೇಂದ್ರ ತೆರಯಲೂ ಸಿದ್ಧತೆ ನಡೆಸುವಂತೆ ಸೂಚಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…