ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ ಮುಂಜಾಗ್ರತಾ ಕ್ರಮ ನಡೆದಿದೆ. ಸುಳ್ಯ ತಾಲೂಕಿನಲ್ಲಿ ಕಳೆದ 15 ದಿನದಲ್ಲಿ 154 ಮಂದಿ ವಿದೇಶದಿಂದ ಬಂದವರು ಇದ್ದಾರೆ. ಹೀಗಾಗಿ ಇವರ ಆರೋಗ್ಯದ ಮೇಲೆ ನಿಗಾ ಹಾಗೂ ಆ ಮನೆಯವರು ಪ್ರತ್ಯೇಕತೆ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸುಳ್ಯ ತಾಲೂಕಿನಲ್ಲಿ ಇದುವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಆದರೆ ತೀವ್ರ ನಿಗಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಂಚಾಯತ್ ಮಟ್ಟದಲ್ಲೂ ಎಚ್ಚರಿಕೆ ವಹಿಸಲಾಗಿದೆ.
ಜನರು ಸಾದ್ಯವಾದಷ್ಟು ವ್ಯಕ್ತಿಗಳ ನಡುವೆ ಅಂತರ ಹಾಗೂ ಅಂಗಡಿಗಳಲ್ಲಿ ಅನಗತ್ಯವಾಗಿ ಮುಟ್ಟುವುದು ಕಡಿಮೆ ಮಾಡಬೇಕು. ಮನೆಯಲ್ಲಿ ಸ್ವಚ್ಛತೆ ಹಾಗೂ ಆಗಾಗ ಕೈ ತೊಳೆಯುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…