ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ ಮುಂಜಾಗ್ರತಾ ಕ್ರಮ ನಡೆದಿದೆ. ಸುಳ್ಯ ತಾಲೂಕಿನಲ್ಲಿ ಕಳೆದ 15 ದಿನದಲ್ಲಿ 154 ಮಂದಿ ವಿದೇಶದಿಂದ ಬಂದವರು ಇದ್ದಾರೆ. ಹೀಗಾಗಿ ಇವರ ಆರೋಗ್ಯದ ಮೇಲೆ ನಿಗಾ ಹಾಗೂ ಆ ಮನೆಯವರು ಪ್ರತ್ಯೇಕತೆ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸುಳ್ಯ ತಾಲೂಕಿನಲ್ಲಿ ಇದುವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಆದರೆ ತೀವ್ರ ನಿಗಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಂಚಾಯತ್ ಮಟ್ಟದಲ್ಲೂ ಎಚ್ಚರಿಕೆ ವಹಿಸಲಾಗಿದೆ.
ಜನರು ಸಾದ್ಯವಾದಷ್ಟು ವ್ಯಕ್ತಿಗಳ ನಡುವೆ ಅಂತರ ಹಾಗೂ ಅಂಗಡಿಗಳಲ್ಲಿ ಅನಗತ್ಯವಾಗಿ ಮುಟ್ಟುವುದು ಕಡಿಮೆ ಮಾಡಬೇಕು. ಮನೆಯಲ್ಲಿ ಸ್ವಚ್ಛತೆ ಹಾಗೂ ಆಗಾಗ ಕೈ ತೊಳೆಯುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?