ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ ಮುಂಜಾಗ್ರತಾ ಕ್ರಮ ನಡೆದಿದೆ. ಸುಳ್ಯ ತಾಲೂಕಿನಲ್ಲಿ ಕಳೆದ 15 ದಿನದಲ್ಲಿ 154 ಮಂದಿ ವಿದೇಶದಿಂದ ಬಂದವರು ಇದ್ದಾರೆ. ಹೀಗಾಗಿ ಇವರ ಆರೋಗ್ಯದ ಮೇಲೆ ನಿಗಾ ಹಾಗೂ ಆ ಮನೆಯವರು ಪ್ರತ್ಯೇಕತೆ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸುಳ್ಯ ತಾಲೂಕಿನಲ್ಲಿ ಇದುವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಆದರೆ ತೀವ್ರ ನಿಗಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಂಚಾಯತ್ ಮಟ್ಟದಲ್ಲೂ ಎಚ್ಚರಿಕೆ ವಹಿಸಲಾಗಿದೆ.
ಜನರು ಸಾದ್ಯವಾದಷ್ಟು ವ್ಯಕ್ತಿಗಳ ನಡುವೆ ಅಂತರ ಹಾಗೂ ಅಂಗಡಿಗಳಲ್ಲಿ ಅನಗತ್ಯವಾಗಿ ಮುಟ್ಟುವುದು ಕಡಿಮೆ ಮಾಡಬೇಕು. ಮನೆಯಲ್ಲಿ ಸ್ವಚ್ಛತೆ ಹಾಗೂ ಆಗಾಗ ಕೈ ತೊಳೆಯುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…