ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ ಮುಂಜಾಗ್ರತಾ ಕ್ರಮ ನಡೆದಿದೆ. ಸುಳ್ಯ ತಾಲೂಕಿನಲ್ಲಿ ಕಳೆದ 15 ದಿನದಲ್ಲಿ 154 ಮಂದಿ ವಿದೇಶದಿಂದ ಬಂದವರು ಇದ್ದಾರೆ. ಹೀಗಾಗಿ ಇವರ ಆರೋಗ್ಯದ ಮೇಲೆ ನಿಗಾ ಹಾಗೂ ಆ ಮನೆಯವರು ಪ್ರತ್ಯೇಕತೆ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸುಳ್ಯ ತಾಲೂಕಿನಲ್ಲಿ ಇದುವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಆದರೆ ತೀವ್ರ ನಿಗಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಂಚಾಯತ್ ಮಟ್ಟದಲ್ಲೂ ಎಚ್ಚರಿಕೆ ವಹಿಸಲಾಗಿದೆ.
ಜನರು ಸಾದ್ಯವಾದಷ್ಟು ವ್ಯಕ್ತಿಗಳ ನಡುವೆ ಅಂತರ ಹಾಗೂ ಅಂಗಡಿಗಳಲ್ಲಿ ಅನಗತ್ಯವಾಗಿ ಮುಟ್ಟುವುದು ಕಡಿಮೆ ಮಾಡಬೇಕು. ಮನೆಯಲ್ಲಿ ಸ್ವಚ್ಛತೆ ಹಾಗೂ ಆಗಾಗ ಕೈ ತೊಳೆಯುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…