Advertisement
ಸುದ್ದಿಗಳು

ಸುಳ್ಯ ತಾಲೂಕಿನಲ್ಲಿ 15 ಸಾವಿರ ಮಂದಿಗೆ ಸಾಲ ಮನ್ನಾ ಹಣ ಬಂದಿದೆ

Share

ಸುಳ್ಯ: ವಾಣಿಜ್ಯ ಬ್ಯಾಂಕ್ ಗಳಲ್ಲಿ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,119 ಮಂದಿಗೆ ಒಟ್ಟು ಸುಳ್ಯ ತಾಲೂಕಿನಲ್ಲಿ 15,202 ಮಂದಿಗೆ ರಾಜ್ಯ ಸರಕಾರದ ಸಾಲಮನ್ನಾ ಯೋಜನೆಯ ಒಂದು ಲಕ್ಷ ಹಣ ಸಂದಾಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದ್ದಾರೆ.

ಸುಳ್ಯದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಳಿದ ರೈತರಿಗೂ ಸಿಗುವಂತೆ ಮಾಡಲು ಕ್ರಮ ಜರುಗಿಸಲು ಮತ್ತು ಖಾತೆಗೆ ನೇರ ಹಣ ಜಮೆ ಆದ ಮಾಹಿತಿಯನ್ನು ರೈತರಿಗೆ ತಿಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಕಂದಾಯ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದ್ದು ಸಮಸ್ಯೆಗಳನ್ನು ತಿಳಿದು ಕೆಲವೊಂದು ಕಂದಾಯ ಕಾನೂನುಗಳನ್ನು ಸರಳೀಕರಣ ಮಾಡಲು ಕಾನೂನು ತಿದ್ದುಪಡಿ ಮಾಡಲಾಗುವುದು. ಈ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು‌ ಎಂದು ಅವರು ತಿಳಿಸಿದ್ದಾರೆ.
ಸರಕಾರಿ ಭೂಮಿಯ ಸಾಗುವಳಿ ಮಾಡಿ ಹಕ್ಕು ಪತ್ರ ನೀಡಲಾಗುತ್ತಿದ್ದು 4.38 ಸೆಂಟ್ಸ್ ವರೆಗಿನ ಸ್ಥಳವನ್ನು ರೈತರಿಗೆ ಮಂಜೂರು ಮಾಡಲಾಗುತ್ತಿದೆ. ಹೀಗೆ ಸುಳ್ಯ ತಾಲೂಕಿನಲ್ಲಿ 20 ಸಾವಿರ ಎಕ್ರೆ ಭೂಮಿ ಕೃಷಿಕರಿಗೆ ಮಂಜೂರು ಮಾಡಲಾಗಿದೆ ಎಂದು ಅವರು ವಿವರಿಸಿದರು.
ಸುಳ್ಯದಲ್ಲಿ 94ಸಿ ಯೋಜನೆಯಲ್ಲಿ ಅತೀ ಹೆಚ್ಚು ಅರ್ಜಿಗಳು ತಿರಸ್ಕಾರಗೊಂಡಿರುವುದು ಕಂಡು ಬರುತಿದೆ. ಇದರ ಮರು ಪರಿಶೀಲನೆಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪುತ್ತೂರು ಸಹಾಯಕ ಕಮೀಷನರ್ ಡಾ.ಹೆಚ್.ಕೆ.ಕೃಷ್ಣಮೂರ್ತಿ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago