Advertisement
ಸುದ್ದಿಗಳು

ಸುಳ್ಯ ತಾಲೂಕಿನಲ್ಲಿ 15 ಸಾವಿರ ಮಂದಿಗೆ ಸಾಲ ಮನ್ನಾ ಹಣ ಬಂದಿದೆ

Share

ಸುಳ್ಯ: ವಾಣಿಜ್ಯ ಬ್ಯಾಂಕ್ ಗಳಲ್ಲಿ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,119 ಮಂದಿಗೆ ಒಟ್ಟು ಸುಳ್ಯ ತಾಲೂಕಿನಲ್ಲಿ 15,202 ಮಂದಿಗೆ ರಾಜ್ಯ ಸರಕಾರದ ಸಾಲಮನ್ನಾ ಯೋಜನೆಯ ಒಂದು ಲಕ್ಷ ಹಣ ಸಂದಾಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದ್ದಾರೆ.

ಸುಳ್ಯದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಳಿದ ರೈತರಿಗೂ ಸಿಗುವಂತೆ ಮಾಡಲು ಕ್ರಮ ಜರುಗಿಸಲು ಮತ್ತು ಖಾತೆಗೆ ನೇರ ಹಣ ಜಮೆ ಆದ ಮಾಹಿತಿಯನ್ನು ರೈತರಿಗೆ ತಿಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಕಂದಾಯ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದ್ದು ಸಮಸ್ಯೆಗಳನ್ನು ತಿಳಿದು ಕೆಲವೊಂದು ಕಂದಾಯ ಕಾನೂನುಗಳನ್ನು ಸರಳೀಕರಣ ಮಾಡಲು ಕಾನೂನು ತಿದ್ದುಪಡಿ ಮಾಡಲಾಗುವುದು. ಈ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು‌ ಎಂದು ಅವರು ತಿಳಿಸಿದ್ದಾರೆ.
ಸರಕಾರಿ ಭೂಮಿಯ ಸಾಗುವಳಿ ಮಾಡಿ ಹಕ್ಕು ಪತ್ರ ನೀಡಲಾಗುತ್ತಿದ್ದು 4.38 ಸೆಂಟ್ಸ್ ವರೆಗಿನ ಸ್ಥಳವನ್ನು ರೈತರಿಗೆ ಮಂಜೂರು ಮಾಡಲಾಗುತ್ತಿದೆ. ಹೀಗೆ ಸುಳ್ಯ ತಾಲೂಕಿನಲ್ಲಿ 20 ಸಾವಿರ ಎಕ್ರೆ ಭೂಮಿ ಕೃಷಿಕರಿಗೆ ಮಂಜೂರು ಮಾಡಲಾಗಿದೆ ಎಂದು ಅವರು ವಿವರಿಸಿದರು.
ಸುಳ್ಯದಲ್ಲಿ 94ಸಿ ಯೋಜನೆಯಲ್ಲಿ ಅತೀ ಹೆಚ್ಚು ಅರ್ಜಿಗಳು ತಿರಸ್ಕಾರಗೊಂಡಿರುವುದು ಕಂಡು ಬರುತಿದೆ. ಇದರ ಮರು ಪರಿಶೀಲನೆಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪುತ್ತೂರು ಸಹಾಯಕ ಕಮೀಷನರ್ ಡಾ.ಹೆಚ್.ಕೆ.ಕೃಷ್ಣಮೂರ್ತಿ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

9 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

9 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago