Advertisement
ಜಿಲ್ಲೆ

ಸುಳ್ಯ ತಾಲೂಕಿನ ಎಲ್ಲಾ ರೈತರಿಗೂ ಸಾಲಮನ್ನಾ ಸೌಲಭ್ಯ ದೊರಕಿಸಿಕೊಡಲು ರೈತ ಸಂಘ ಒತ್ತಾಯ

Share
ಸುಳ್ಯ: ಕರ್ನಾಟಕ  ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸುಳ್ಯ ತಾಲೂಕು ಘಟಕ ಹಾಗೂ ಅರಂತೋಡು ವಲಯ ಘಟಕ ಹಮ್ಮಿಕೊಂಡ ರೈತರ ಸಾಲ ಮನ್ನಾ ವಿಳಂಬ ಬಗ್ಗೆ  ಅರಂತೋಡು ಸಹಕಾರಿ ಸಂಘದ ಎದುರು ಗುರುವಾರ ಬೆಳಗ್ಗೆ ಪ್ರತಿಭಟನೆ ಪ್ರಾರಂಭವಾಯಿತು.
ಮದ್ಯಾಹ್ನ ಸಹಕಾರಿ ಬ್ಯಾಂಕ್ ನ ಸುಳ್ಯ ವಲಯ ಸೂಪರ್ವೈಸರ್ ಕೊಟ್ಟ ಸಮಜಾಯಿಷಿಗೆ ರೈತರು ಒಪ್ಪದೇ ಡಿ ಆರ್ ಆವರೇ ಬಂದು ಸರಿಯಾದ ಉತ್ತರ ಕೊಡಬೇಕು ಇಲ್ಲದೇ ಇದ್ದರೆ
ಅಹೋರಾತ್ರಿ ಧರಣಿ ಕುಳಿತುಕೊಳ್ಳುವುದಾಗಿ ಪ್ರತಿಭಟನಾಕಾರರು ಹೇಳಿದರು. ಕೊನೆಗೆ ಸುಳ್ಯದ ತಹಶೀಲ್ದಾರರು ಮುತುವರ್ಜಿ ವಹಿಸಿ  ಅರಂತೋಡಿಗೆ ಆಗಮಿಸಿದರು ಮತ್ತು ಸಹಕಾರಿ ದ .ಕ  ಜಿಲ್ಲಾ ರಿಜಿಸ್ಟ್ರಾರ್ ಬರುವಂತೆ ಹಾಗು ಬೇರೊಂದು ಕಾರ್ಯಕ್ರಮಕ್ಕೆ ಬಂದಿದ್ದ ಜಾಯಿಂಟ್ ರಿಜಿಸ್ಟ್ರಾರ್  ಅರಂತೋಡಿಗೆ ಬರುವಂತೆ ವ್ಯವಸ್ಥೆ ಮಾಡಿದರು. ಜಾಯಿಂಟ್ ರಿಜಿಸ್ಟ್ರಾರ್ ಅವರು ರೈತರ ಅಹವಾಲು ಸ್ವೀಕರಿಸಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಸಾಲ ಮನ್ನಾ ಎಲ್ಲಾ ರೈತರ ಖಾತೆಗಳಿಗೆ ಜಮಾ ಮಾಡುವಂತೆ ಡಿ ಆರ್  ಅವರಿಗೂ ಅಸಿಸ್ಟೆಂಟ್ ರಿಜಿಸ್ಟ್ರಾರ್ ಅವರಿಗೆ ಸೂಚಿಸಿದರು.
ಈ ಸಂದರ್ಭ ಮಾತನಾಡಿದ ರೈತ ಸಂಘದ ಮುಖಂಡರು, ಸುಳ್ಯ ತಾಲೂಕಿನ ಸುಮಾರು ನಾಲ್ಕು ಸಾವಿರ ರೈತರ ಅರ್ಜಿ ಅಪ್ರೂವಲ್ ಗೆ ಇರುವ ಸಣ್ಣ ಪುಟ್ಟ ನ್ಯೂನತೆ ಗಳನ್ನು ಸರಿಪಡಿಸಿ ತಾಲುಕಿನ ಎಲ್ಲಾ ರೈತರಿಗೂ ಸಾಲ ಮನ್ನ ದೊರಕಿಸಿ ಕೊಡಬೇಕೆಂದು ಒತ್ತಾಯಿಸಿದರು. ಜಾಯಿಂಟ್ ರಿಜಿಸ್ಟ್ರಾರ್ ಅವರು ಅಂತಹ ನ್ಯೂನತೆಗಳನ್ನು ತಹಶೀಲ್ದಾರ ರ ಸಮಿತಿ ಸರಿಪಡಿಸಿ ಕೊಡಲು ತಹಶೀಲ್ದಾರರಿಗೆ ಸೂಚಿಸಿದರು. ಸುಳ್ಯ ಶಾಸಕ ಅಂಗಾರ ಅವರು ಬೇರೊಂದು ಕಾರ್ಯಕ್ರಮದ ಇದ್ದು ಸಹಕಾರಿ ಸಚಿವರಲ್ಲಿ ಮಾತಾಡಿ ವ್ಯವಸ್ಥೆ ಮಾಡುತೇನೆ ಎಂದು ರೈತ ಸಂಘದ ಮುಖಂಡರಿಗೆ ತಿಳಿಸಿದ್ದರು.
ಸಭೆಯಲ್ಲಿ  ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ,ಸುಳ್ಯ ತಾಲೂಕು ರೈತ ಸಂಘದ ಪದಾಧಿಕಾರಿಗಳು .ಅರಂತೋಡು ,ಜಾಲ್ಸೂರು ,ಅಜ್ಜಾವರ, ಆಲೆಟ್ಟಿ, ಉಬರಡ್ಕ,  ಮಡಪ್ಪಾಡಿ ಮುಂತಾದ ಹಲವಾರು ಗ್ರಾಮಗಳ ರೈತ ಸಂಘ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು .
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

8 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

10 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

18 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

24 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago