Advertisement
ಜಿಲ್ಲೆ

ಸುಳ್ಯ ತಾಲೂಕಿನ ಎಲ್ಲಾ ರೈತರಿಗೂ ಸಾಲಮನ್ನಾ ಸೌಲಭ್ಯ ದೊರಕಿಸಿಕೊಡಲು ರೈತ ಸಂಘ ಒತ್ತಾಯ

Share
ಸುಳ್ಯ: ಕರ್ನಾಟಕ  ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸುಳ್ಯ ತಾಲೂಕು ಘಟಕ ಹಾಗೂ ಅರಂತೋಡು ವಲಯ ಘಟಕ ಹಮ್ಮಿಕೊಂಡ ರೈತರ ಸಾಲ ಮನ್ನಾ ವಿಳಂಬ ಬಗ್ಗೆ  ಅರಂತೋಡು ಸಹಕಾರಿ ಸಂಘದ ಎದುರು ಗುರುವಾರ ಬೆಳಗ್ಗೆ ಪ್ರತಿಭಟನೆ ಪ್ರಾರಂಭವಾಯಿತು.
ಮದ್ಯಾಹ್ನ ಸಹಕಾರಿ ಬ್ಯಾಂಕ್ ನ ಸುಳ್ಯ ವಲಯ ಸೂಪರ್ವೈಸರ್ ಕೊಟ್ಟ ಸಮಜಾಯಿಷಿಗೆ ರೈತರು ಒಪ್ಪದೇ ಡಿ ಆರ್ ಆವರೇ ಬಂದು ಸರಿಯಾದ ಉತ್ತರ ಕೊಡಬೇಕು ಇಲ್ಲದೇ ಇದ್ದರೆ
ಅಹೋರಾತ್ರಿ ಧರಣಿ ಕುಳಿತುಕೊಳ್ಳುವುದಾಗಿ ಪ್ರತಿಭಟನಾಕಾರರು ಹೇಳಿದರು. ಕೊನೆಗೆ ಸುಳ್ಯದ ತಹಶೀಲ್ದಾರರು ಮುತುವರ್ಜಿ ವಹಿಸಿ  ಅರಂತೋಡಿಗೆ ಆಗಮಿಸಿದರು ಮತ್ತು ಸಹಕಾರಿ ದ .ಕ  ಜಿಲ್ಲಾ ರಿಜಿಸ್ಟ್ರಾರ್ ಬರುವಂತೆ ಹಾಗು ಬೇರೊಂದು ಕಾರ್ಯಕ್ರಮಕ್ಕೆ ಬಂದಿದ್ದ ಜಾಯಿಂಟ್ ರಿಜಿಸ್ಟ್ರಾರ್  ಅರಂತೋಡಿಗೆ ಬರುವಂತೆ ವ್ಯವಸ್ಥೆ ಮಾಡಿದರು. ಜಾಯಿಂಟ್ ರಿಜಿಸ್ಟ್ರಾರ್ ಅವರು ರೈತರ ಅಹವಾಲು ಸ್ವೀಕರಿಸಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಸಾಲ ಮನ್ನಾ ಎಲ್ಲಾ ರೈತರ ಖಾತೆಗಳಿಗೆ ಜಮಾ ಮಾಡುವಂತೆ ಡಿ ಆರ್  ಅವರಿಗೂ ಅಸಿಸ್ಟೆಂಟ್ ರಿಜಿಸ್ಟ್ರಾರ್ ಅವರಿಗೆ ಸೂಚಿಸಿದರು.
ಈ ಸಂದರ್ಭ ಮಾತನಾಡಿದ ರೈತ ಸಂಘದ ಮುಖಂಡರು, ಸುಳ್ಯ ತಾಲೂಕಿನ ಸುಮಾರು ನಾಲ್ಕು ಸಾವಿರ ರೈತರ ಅರ್ಜಿ ಅಪ್ರೂವಲ್ ಗೆ ಇರುವ ಸಣ್ಣ ಪುಟ್ಟ ನ್ಯೂನತೆ ಗಳನ್ನು ಸರಿಪಡಿಸಿ ತಾಲುಕಿನ ಎಲ್ಲಾ ರೈತರಿಗೂ ಸಾಲ ಮನ್ನ ದೊರಕಿಸಿ ಕೊಡಬೇಕೆಂದು ಒತ್ತಾಯಿಸಿದರು. ಜಾಯಿಂಟ್ ರಿಜಿಸ್ಟ್ರಾರ್ ಅವರು ಅಂತಹ ನ್ಯೂನತೆಗಳನ್ನು ತಹಶೀಲ್ದಾರ ರ ಸಮಿತಿ ಸರಿಪಡಿಸಿ ಕೊಡಲು ತಹಶೀಲ್ದಾರರಿಗೆ ಸೂಚಿಸಿದರು. ಸುಳ್ಯ ಶಾಸಕ ಅಂಗಾರ ಅವರು ಬೇರೊಂದು ಕಾರ್ಯಕ್ರಮದ ಇದ್ದು ಸಹಕಾರಿ ಸಚಿವರಲ್ಲಿ ಮಾತಾಡಿ ವ್ಯವಸ್ಥೆ ಮಾಡುತೇನೆ ಎಂದು ರೈತ ಸಂಘದ ಮುಖಂಡರಿಗೆ ತಿಳಿಸಿದ್ದರು.
ಸಭೆಯಲ್ಲಿ  ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ,ಸುಳ್ಯ ತಾಲೂಕು ರೈತ ಸಂಘದ ಪದಾಧಿಕಾರಿಗಳು .ಅರಂತೋಡು ,ಜಾಲ್ಸೂರು ,ಅಜ್ಜಾವರ, ಆಲೆಟ್ಟಿ, ಉಬರಡ್ಕ,  ಮಡಪ್ಪಾಡಿ ಮುಂತಾದ ಹಲವಾರು ಗ್ರಾಮಗಳ ರೈತ ಸಂಘ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು .
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

7 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

11 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

22 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

24 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

1 day ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

1 day ago