Advertisement
MIRROR FOCUS

ಸುಳ್ಯ ತಾಲೂಕಿನ ಸೇತುವೆಗಳ ತಪಾಸಣೆ : ನಡೆಯುತ್ತಿದೆ ಸೇತುವೆಗಳ ಬಲ ಪರೀಕ್ಷೆ…

Share

ಸುಳ್ಯ: ಲೋಕೋಪಯೋಗಿ ಸುಳ್ಯ ಉಪವಿಭಾಗದ ಪ್ರಮುಖ ಸೇತುವೆಗಳ ತಪಾಸಣಾ ಕಾರ್ಯ ನಡೆಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣಾ ಕೇಂದ್ರದ ಸೇತುವೆ ತಪಾಸಣಾ ವಾಹನವು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿನ ಪ್ರಮುಖ ಲೋಕೋಪಯೋಗಿ ಇಲಾಖೆಯ ಸೇತುವೆಗಳ ತಪಾಸಣೆ ನಡೆಸಲಾಗುತ್ತಿದೆ. ಮಂಗಳವಾರ ಸುಳ್ಯ ತಾಲೂಕಿನ ಪ್ರಮುಖ ಸೇತುವೆಗಳ ತಪಾಸಣೆ ನಡೆಸಲಾಗಿದ್ದು ಬುಧವಾರವೂ ಸೇತುವೆಗಳ ಬಲ ಪರೀಕ್ಷೆ ಮುಂದುವರಿಯಲಿದೆ.

ಆಧುನಿಕ ತಪಾಸಣಾ ವಾಹನದ ಸಹಾಯದಿಂದ ಸೇತುವೆಗಳ ಇಂಚು ಇಂಚನ್ನು ಪರಿಶೀಲಿಸುತ್ತಾರೆ. ಸೇತುವೆಗಳ ಫಿಲ್ಲರ್, ಸ್ಲಾಬ್, ಗರ್ಡರ್ ಮತ್ತಿತರ ಭಾಗಗಳನ್ನು ತಪಾಸಣೆ ನಡೆಸಲಾಗುತ್ತದೆ. ಸೇತುವೆಯ ಸಂಪೂರ್ಣ ಪರೀಕ್ಷೆ ನಡೆಸಿ ಸೇತುವೆಯ ಯಾವುದಾದರೂ ಭಾಗಗಳಿಗೆ ಹಾನಿ ಉಂಟಾಗಿದೆಯೇ ಅಥವಾ ಸೇತುವೆ ಶಿಥಿಲಗೊಂಡಿದೆಯೇ ಎಂದು ಪತ್ತೆ ಹಚ್ಚಲಾಗುತ್ತದೆ. ತಪಾಸಣೆ ನಡೆಸಿದ ಬಳಿಕ ಸೇತುವೆಯ ಕುರಿತು ವಿಸ್ತೃತ ವರದಿಯಯನ್ನು ಸಲ್ಲಿಸಲಾಗುತ್ತದೆ. ಈ ವರದಿಯ ಆಧಾರದಲ್ಲಿ ಸೇತುವೆಯ ದುರಸ್ಥಿ, ನವೀಕರಣ ಅಥವಾ ಪುನರ್ ನಿರ್ಮಾಣ ಕಾರ್ಯ ನಡೆಸಲಾಗುತ್ತದೆ.

ಸುಳ್ಯ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿನ ಅಡ್ಕಾರು, ಏನೆಕಲ್ಲು, ಸುಬ್ರಹ್ಮಣ್ಯ, ಪುಳಿಕುಕ್ಕು ಮತ್ತಿತರ ಪ್ರಮುಖ ಸೇತುವೆಗಳ ಪರಿಶೀಲನಾ ಕಾರ್ಯ ನಡೆಸಲಾಗುತ್ತದೆ. ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂತಮಂಗಲ ಸೇತುವೆ, ನಾಗಪಟ್ಟಣ ಸೇತುವೆಗಳ ತಪಾಸಣೆಯನ್ನೂ ನಡೆಸಲಾಗುತ್ತದೆ. ತಪಾಸಣೆಯ ವರದಿ ದೊರೆತ ಬಳಿಕ ಸೇತುವೆಗಳ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸುಳ್ಯ ಲೋಕೋಪಯೋಗಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ.

ಕಳೆದ ವರ್ಷ ನವೀಕರಣಗೊಂಡ ಕಾಂತಮಂಗಲ ಸೇತುವೆಯನ್ನು ಮಂಗಳವಾರ ಮಧ್ಯಾಹ್ನ ಪರಿಶೀಲಿಸಲಾಯಿತು. ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ, ಸೇತುವೆ ತಪಾಸಣಾ ವಾಹನದ ಇಂಜನಿಯರ್‍ಗಳಾದ ಚೆನ್ನಬಸವೇಶ್, ಮಧು ಗೌಡ, ಯತೀಶ್, ಸುಳ್ಯ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗ ಳಾದ ಮಣಿಕಂಠ, ಎಸ್.ಎಸ್.ಹುಕ್ಕೇರಿ, ನೀರು ಸರಬರಾಜು ವಿಭಾಗದ ಎಇಇ ಸುರೇಶ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ಚಂದ್ರಶೇಖರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತಪಾಸಣಾ ವಾಹನವು ಜಿಲ್ಲೆಯಾದ್ಯಂತ ಸೇತುವೆಗಳ ತಪಾಸಣೆ ನಡೆಸಲಿದೆ ಎಂದು ಇಂಜಿನಿಯರ್ ಗಳು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

3 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

4 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

4 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

4 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

13 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

17 hours ago