Advertisement
MIRROR FOCUS

ಸುಳ್ಯ ತಾಲೂಕಿನ ಸೇತುವೆಗಳ ತಪಾಸಣೆ : ನಡೆಯುತ್ತಿದೆ ಸೇತುವೆಗಳ ಬಲ ಪರೀಕ್ಷೆ…

Share

ಸುಳ್ಯ: ಲೋಕೋಪಯೋಗಿ ಸುಳ್ಯ ಉಪವಿಭಾಗದ ಪ್ರಮುಖ ಸೇತುವೆಗಳ ತಪಾಸಣಾ ಕಾರ್ಯ ನಡೆಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣಾ ಕೇಂದ್ರದ ಸೇತುವೆ ತಪಾಸಣಾ ವಾಹನವು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿನ ಪ್ರಮುಖ ಲೋಕೋಪಯೋಗಿ ಇಲಾಖೆಯ ಸೇತುವೆಗಳ ತಪಾಸಣೆ ನಡೆಸಲಾಗುತ್ತಿದೆ. ಮಂಗಳವಾರ ಸುಳ್ಯ ತಾಲೂಕಿನ ಪ್ರಮುಖ ಸೇತುವೆಗಳ ತಪಾಸಣೆ ನಡೆಸಲಾಗಿದ್ದು ಬುಧವಾರವೂ ಸೇತುವೆಗಳ ಬಲ ಪರೀಕ್ಷೆ ಮುಂದುವರಿಯಲಿದೆ.

Advertisement

ಆಧುನಿಕ ತಪಾಸಣಾ ವಾಹನದ ಸಹಾಯದಿಂದ ಸೇತುವೆಗಳ ಇಂಚು ಇಂಚನ್ನು ಪರಿಶೀಲಿಸುತ್ತಾರೆ. ಸೇತುವೆಗಳ ಫಿಲ್ಲರ್, ಸ್ಲಾಬ್, ಗರ್ಡರ್ ಮತ್ತಿತರ ಭಾಗಗಳನ್ನು ತಪಾಸಣೆ ನಡೆಸಲಾಗುತ್ತದೆ. ಸೇತುವೆಯ ಸಂಪೂರ್ಣ ಪರೀಕ್ಷೆ ನಡೆಸಿ ಸೇತುವೆಯ ಯಾವುದಾದರೂ ಭಾಗಗಳಿಗೆ ಹಾನಿ ಉಂಟಾಗಿದೆಯೇ ಅಥವಾ ಸೇತುವೆ ಶಿಥಿಲಗೊಂಡಿದೆಯೇ ಎಂದು ಪತ್ತೆ ಹಚ್ಚಲಾಗುತ್ತದೆ. ತಪಾಸಣೆ ನಡೆಸಿದ ಬಳಿಕ ಸೇತುವೆಯ ಕುರಿತು ವಿಸ್ತೃತ ವರದಿಯಯನ್ನು ಸಲ್ಲಿಸಲಾಗುತ್ತದೆ. ಈ ವರದಿಯ ಆಧಾರದಲ್ಲಿ ಸೇತುವೆಯ ದುರಸ್ಥಿ, ನವೀಕರಣ ಅಥವಾ ಪುನರ್ ನಿರ್ಮಾಣ ಕಾರ್ಯ ನಡೆಸಲಾಗುತ್ತದೆ.

ಸುಳ್ಯ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿನ ಅಡ್ಕಾರು, ಏನೆಕಲ್ಲು, ಸುಬ್ರಹ್ಮಣ್ಯ, ಪುಳಿಕುಕ್ಕು ಮತ್ತಿತರ ಪ್ರಮುಖ ಸೇತುವೆಗಳ ಪರಿಶೀಲನಾ ಕಾರ್ಯ ನಡೆಸಲಾಗುತ್ತದೆ. ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂತಮಂಗಲ ಸೇತುವೆ, ನಾಗಪಟ್ಟಣ ಸೇತುವೆಗಳ ತಪಾಸಣೆಯನ್ನೂ ನಡೆಸಲಾಗುತ್ತದೆ. ತಪಾಸಣೆಯ ವರದಿ ದೊರೆತ ಬಳಿಕ ಸೇತುವೆಗಳ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸುಳ್ಯ ಲೋಕೋಪಯೋಗಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ.

ಕಳೆದ ವರ್ಷ ನವೀಕರಣಗೊಂಡ ಕಾಂತಮಂಗಲ ಸೇತುವೆಯನ್ನು ಮಂಗಳವಾರ ಮಧ್ಯಾಹ್ನ ಪರಿಶೀಲಿಸಲಾಯಿತು. ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ, ಸೇತುವೆ ತಪಾಸಣಾ ವಾಹನದ ಇಂಜನಿಯರ್‍ಗಳಾದ ಚೆನ್ನಬಸವೇಶ್, ಮಧು ಗೌಡ, ಯತೀಶ್, ಸುಳ್ಯ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗ ಳಾದ ಮಣಿಕಂಠ, ಎಸ್.ಎಸ್.ಹುಕ್ಕೇರಿ, ನೀರು ಸರಬರಾಜು ವಿಭಾಗದ ಎಇಇ ಸುರೇಶ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ಚಂದ್ರಶೇಖರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತಪಾಸಣಾ ವಾಹನವು ಜಿಲ್ಲೆಯಾದ್ಯಂತ ಸೇತುವೆಗಳ ತಪಾಸಣೆ ನಡೆಸಲಿದೆ ಎಂದು ಇಂಜಿನಿಯರ್ ಗಳು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

5 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

11 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

21 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

21 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago