Advertisement
MIRROR FOCUS

ಸುಳ್ಯ ತಾಲೂಕಿನ ಸೇತುವೆಗಳ ತಪಾಸಣೆ : ನಡೆಯುತ್ತಿದೆ ಸೇತುವೆಗಳ ಬಲ ಪರೀಕ್ಷೆ…

Share

ಸುಳ್ಯ: ಲೋಕೋಪಯೋಗಿ ಸುಳ್ಯ ಉಪವಿಭಾಗದ ಪ್ರಮುಖ ಸೇತುವೆಗಳ ತಪಾಸಣಾ ಕಾರ್ಯ ನಡೆಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣಾ ಕೇಂದ್ರದ ಸೇತುವೆ ತಪಾಸಣಾ ವಾಹನವು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿನ ಪ್ರಮುಖ ಲೋಕೋಪಯೋಗಿ ಇಲಾಖೆಯ ಸೇತುವೆಗಳ ತಪಾಸಣೆ ನಡೆಸಲಾಗುತ್ತಿದೆ. ಮಂಗಳವಾರ ಸುಳ್ಯ ತಾಲೂಕಿನ ಪ್ರಮುಖ ಸೇತುವೆಗಳ ತಪಾಸಣೆ ನಡೆಸಲಾಗಿದ್ದು ಬುಧವಾರವೂ ಸೇತುವೆಗಳ ಬಲ ಪರೀಕ್ಷೆ ಮುಂದುವರಿಯಲಿದೆ.

Advertisement
Advertisement

ಆಧುನಿಕ ತಪಾಸಣಾ ವಾಹನದ ಸಹಾಯದಿಂದ ಸೇತುವೆಗಳ ಇಂಚು ಇಂಚನ್ನು ಪರಿಶೀಲಿಸುತ್ತಾರೆ. ಸೇತುವೆಗಳ ಫಿಲ್ಲರ್, ಸ್ಲಾಬ್, ಗರ್ಡರ್ ಮತ್ತಿತರ ಭಾಗಗಳನ್ನು ತಪಾಸಣೆ ನಡೆಸಲಾಗುತ್ತದೆ. ಸೇತುವೆಯ ಸಂಪೂರ್ಣ ಪರೀಕ್ಷೆ ನಡೆಸಿ ಸೇತುವೆಯ ಯಾವುದಾದರೂ ಭಾಗಗಳಿಗೆ ಹಾನಿ ಉಂಟಾಗಿದೆಯೇ ಅಥವಾ ಸೇತುವೆ ಶಿಥಿಲಗೊಂಡಿದೆಯೇ ಎಂದು ಪತ್ತೆ ಹಚ್ಚಲಾಗುತ್ತದೆ. ತಪಾಸಣೆ ನಡೆಸಿದ ಬಳಿಕ ಸೇತುವೆಯ ಕುರಿತು ವಿಸ್ತೃತ ವರದಿಯಯನ್ನು ಸಲ್ಲಿಸಲಾಗುತ್ತದೆ. ಈ ವರದಿಯ ಆಧಾರದಲ್ಲಿ ಸೇತುವೆಯ ದುರಸ್ಥಿ, ನವೀಕರಣ ಅಥವಾ ಪುನರ್ ನಿರ್ಮಾಣ ಕಾರ್ಯ ನಡೆಸಲಾಗುತ್ತದೆ.

Advertisement

ಸುಳ್ಯ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿನ ಅಡ್ಕಾರು, ಏನೆಕಲ್ಲು, ಸುಬ್ರಹ್ಮಣ್ಯ, ಪುಳಿಕುಕ್ಕು ಮತ್ತಿತರ ಪ್ರಮುಖ ಸೇತುವೆಗಳ ಪರಿಶೀಲನಾ ಕಾರ್ಯ ನಡೆಸಲಾಗುತ್ತದೆ. ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂತಮಂಗಲ ಸೇತುವೆ, ನಾಗಪಟ್ಟಣ ಸೇತುವೆಗಳ ತಪಾಸಣೆಯನ್ನೂ ನಡೆಸಲಾಗುತ್ತದೆ. ತಪಾಸಣೆಯ ವರದಿ ದೊರೆತ ಬಳಿಕ ಸೇತುವೆಗಳ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸುಳ್ಯ ಲೋಕೋಪಯೋಗಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ.

ಕಳೆದ ವರ್ಷ ನವೀಕರಣಗೊಂಡ ಕಾಂತಮಂಗಲ ಸೇತುವೆಯನ್ನು ಮಂಗಳವಾರ ಮಧ್ಯಾಹ್ನ ಪರಿಶೀಲಿಸಲಾಯಿತು. ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ, ಸೇತುವೆ ತಪಾಸಣಾ ವಾಹನದ ಇಂಜನಿಯರ್‍ಗಳಾದ ಚೆನ್ನಬಸವೇಶ್, ಮಧು ಗೌಡ, ಯತೀಶ್, ಸುಳ್ಯ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗ ಳಾದ ಮಣಿಕಂಠ, ಎಸ್.ಎಸ್.ಹುಕ್ಕೇರಿ, ನೀರು ಸರಬರಾಜು ವಿಭಾಗದ ಎಇಇ ಸುರೇಶ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ಚಂದ್ರಶೇಖರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತಪಾಸಣಾ ವಾಹನವು ಜಿಲ್ಲೆಯಾದ್ಯಂತ ಸೇತುವೆಗಳ ತಪಾಸಣೆ ನಡೆಸಲಿದೆ ಎಂದು ಇಂಜಿನಿಯರ್ ಗಳು ತಿಳಿಸಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

22 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago