ಸುಳ್ಯ:ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ ಡಿ.26ರಂದು ಅಜ್ಜಾವರ ಗ್ರಾಮದ ಮುಳ್ಯಕಜೆ ಕಾಲೊನಿಯಲ್ಲಿ ನಡೆಯಿತು.
ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಳ್ಯ ಅಟ್ಲೂರು ಯುವಕ ಸಂಘದ ಗೌರವಾಧ್ಯಕ್ಷ ಎಂ.ಎನ್. ಶ್ರೀಕೃಷ್ಣ ಸೋಮಯಾಗಿ, ಗ್ರಾ.ಪಂ. ಸದಸ್ಯರಾದ ಜಯರಾಮ ಮುಂಡೋಳಿಮೂಲೆ, ಗೀತಾ ಮುಳ್ಯ, ವಸಂತಿ ಮುಳ್ಯ, ಮಾಜಿ ಸದಸ್ಯರಾದ ನಾಗರಾಜ ಮುಳ್ಯ, ಮೋಹನ್ ಮುಳ್ಯ, ಸೋಮನಾಥ ಮುಳ್ಯಕಜೆ, ಹಿರಿಯರಾದ ತಾಪೂರ ಮುಳ್ಯಕಜೆ ಇದ್ದರು.
ನಾಟಿ ವೈದ್ಯೆ ಸುಶೀಲಾ ಅವರನ್ನು ಸನ್ಮಾನಿಸಲಾಯಿತು.ರಾಮ ಮುಳ್ಯಕಜೆಯವರಿಗೆ ಸಹಾಯಧನ ವಿತರಿಸಲಾಯಿತು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಶಿವಪ್ರಸಾದ್ ಕೇರ್ಪಳ ಸ್ವಾಗತಿಸಿ, ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಕಾರ್ಯದರ್ಶಿ ಲೋಕೇಶ್ ಗುಡ್ಡೆಮನೆ ಸನ್ಮಾನ ಪತ್ರ ವಾಚಿಸಿದರು.ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ವಂದಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…