ಸುಳ್ಯ:ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ ಡಿ.26ರಂದು ಅಜ್ಜಾವರ ಗ್ರಾಮದ ಮುಳ್ಯಕಜೆ ಕಾಲೊನಿಯಲ್ಲಿ ನಡೆಯಿತು.
ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಳ್ಯ ಅಟ್ಲೂರು ಯುವಕ ಸಂಘದ ಗೌರವಾಧ್ಯಕ್ಷ ಎಂ.ಎನ್. ಶ್ರೀಕೃಷ್ಣ ಸೋಮಯಾಗಿ, ಗ್ರಾ.ಪಂ. ಸದಸ್ಯರಾದ ಜಯರಾಮ ಮುಂಡೋಳಿಮೂಲೆ, ಗೀತಾ ಮುಳ್ಯ, ವಸಂತಿ ಮುಳ್ಯ, ಮಾಜಿ ಸದಸ್ಯರಾದ ನಾಗರಾಜ ಮುಳ್ಯ, ಮೋಹನ್ ಮುಳ್ಯ, ಸೋಮನಾಥ ಮುಳ್ಯಕಜೆ, ಹಿರಿಯರಾದ ತಾಪೂರ ಮುಳ್ಯಕಜೆ ಇದ್ದರು.
ನಾಟಿ ವೈದ್ಯೆ ಸುಶೀಲಾ ಅವರನ್ನು ಸನ್ಮಾನಿಸಲಾಯಿತು.ರಾಮ ಮುಳ್ಯಕಜೆಯವರಿಗೆ ಸಹಾಯಧನ ವಿತರಿಸಲಾಯಿತು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಶಿವಪ್ರಸಾದ್ ಕೇರ್ಪಳ ಸ್ವಾಗತಿಸಿ, ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಕಾರ್ಯದರ್ಶಿ ಲೋಕೇಶ್ ಗುಡ್ಡೆಮನೆ ಸನ್ಮಾನ ಪತ್ರ ವಾಚಿಸಿದರು.ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ವಂದಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…