ಸುಳ್ಯ:ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ ಡಿ.26ರಂದು ಅಜ್ಜಾವರ ಗ್ರಾಮದ ಮುಳ್ಯಕಜೆ ಕಾಲೊನಿಯಲ್ಲಿ ನಡೆಯಿತು.
ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಳ್ಯ ಅಟ್ಲೂರು ಯುವಕ ಸಂಘದ ಗೌರವಾಧ್ಯಕ್ಷ ಎಂ.ಎನ್. ಶ್ರೀಕೃಷ್ಣ ಸೋಮಯಾಗಿ, ಗ್ರಾ.ಪಂ. ಸದಸ್ಯರಾದ ಜಯರಾಮ ಮುಂಡೋಳಿಮೂಲೆ, ಗೀತಾ ಮುಳ್ಯ, ವಸಂತಿ ಮುಳ್ಯ, ಮಾಜಿ ಸದಸ್ಯರಾದ ನಾಗರಾಜ ಮುಳ್ಯ, ಮೋಹನ್ ಮುಳ್ಯ, ಸೋಮನಾಥ ಮುಳ್ಯಕಜೆ, ಹಿರಿಯರಾದ ತಾಪೂರ ಮುಳ್ಯಕಜೆ ಇದ್ದರು.
ನಾಟಿ ವೈದ್ಯೆ ಸುಶೀಲಾ ಅವರನ್ನು ಸನ್ಮಾನಿಸಲಾಯಿತು.ರಾಮ ಮುಳ್ಯಕಜೆಯವರಿಗೆ ಸಹಾಯಧನ ವಿತರಿಸಲಾಯಿತು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಶಿವಪ್ರಸಾದ್ ಕೇರ್ಪಳ ಸ್ವಾಗತಿಸಿ, ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಕಾರ್ಯದರ್ಶಿ ಲೋಕೇಶ್ ಗುಡ್ಡೆಮನೆ ಸನ್ಮಾನ ಪತ್ರ ವಾಚಿಸಿದರು.ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ವಂದಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…