ಸುಳ್ಯ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿ ಪಿ ಆರ್ ಸುಳ್ಯ ತಾಲೂಕು ಇದರ ಸಭೆಯು ಅಧ್ಯಕ್ಷ ಚಿದಾನಂದ ಜಾಲ್ಸೂರು ಇವರ ಅಧ್ಯಕ್ಷತೆಯಲ್ಲಿ ಜಾಲ್ಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ವೇದಿಕೆಯಲ್ಲಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ದೇವಿಪ್ರಸಾದ್ ಬೊಳ್ಮ, ಜಿಲ್ಲಾ ಕಾರ್ಯದರ್ಶಿ ರಜೀಶ್ ಉಬರಡ್ಕ, ತಾಲೂಕು ಉಪಾಧ್ಯಕ್ಷರಾದ ನಾಗವೇಣಿ ಮಡಪ್ಪಾಡಿ, ಕಾರ್ಯದರ್ಶಿ ನೇತ್ರಾವತಿ ಮರ್ಕಂಜ, ಜೊತೆ ಕಾರ್ಯದರ್ಶಿ ನೇತ್ರಾವತಿ ಆಲೆಟ್ಟಿ, ಮೈಸೂರು ನೌಕರರ ಸಂಘದ ವಿವಿಧ ಪದಾಧಿಕಾರಿಗಳು, ಸುಳ್ಯ ತಾಲೂಕು ಸಂಘದ ವಿವಿಧ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರಿಗೆ ಸರಕಾರದಿಂದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ, ಸೇವಾ ಭದ್ರತೆ ಮತ್ತು ಇತರ ಇಲಾಖೆಗಳ ಕೆಲಸಗಳನ್ನು ಗ್ರಾಮ ಪಂಚಾಯತ್ ಗೆ ವಹಿಸಿ ಪಂಚಾಯತ್ ನೌಕರರಿಗೆ ತೀವ್ರ ಒತ್ತಡ ನೀಡುವುದರ ಕುರಿತು ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುವುದೆಂದು ನಿರ್ಣಯಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ಮತ್ತು ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್ ಪಡೆದಿರುವ ರಾಜ್ಯಾಧ್ಯಕ್ಷರಾದ ದೇವಿಪ್ರಸಾದ್ ಬೊಳ್ಮ ಇವರನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ಸುಳ್ಯ ತಾಲೂಕು ಸಂಘದ ಸದಸ್ಯರಾದ ಗಿರಿಧರ ಕಳಂಜ ಸ್ವಾಗತಿಸಿ, ಕಾರ್ಯದರ್ಶಿ ನೇತ್ರಾವತಿ ಮರ್ಕಂಜ ವಂದಿಸಿ, ಜಿಲ್ಲಾ ಕಾರ್ಯದರ್ಶಿ ರಜೀಶ್ ಉಬರಡ್ಕ ಕಾರ್ಯಕ್ರಮ ನಿರೂಪಿಸಿದರು.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…