ಸುಳ್ಯ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿ ಪಿ ಆರ್ ಸುಳ್ಯ ತಾಲೂಕು ಇದರ ಸಭೆಯು ಅಧ್ಯಕ್ಷ ಚಿದಾನಂದ ಜಾಲ್ಸೂರು ಇವರ ಅಧ್ಯಕ್ಷತೆಯಲ್ಲಿ ಜಾಲ್ಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ವೇದಿಕೆಯಲ್ಲಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ದೇವಿಪ್ರಸಾದ್ ಬೊಳ್ಮ, ಜಿಲ್ಲಾ ಕಾರ್ಯದರ್ಶಿ ರಜೀಶ್ ಉಬರಡ್ಕ, ತಾಲೂಕು ಉಪಾಧ್ಯಕ್ಷರಾದ ನಾಗವೇಣಿ ಮಡಪ್ಪಾಡಿ, ಕಾರ್ಯದರ್ಶಿ ನೇತ್ರಾವತಿ ಮರ್ಕಂಜ, ಜೊತೆ ಕಾರ್ಯದರ್ಶಿ ನೇತ್ರಾವತಿ ಆಲೆಟ್ಟಿ, ಮೈಸೂರು ನೌಕರರ ಸಂಘದ ವಿವಿಧ ಪದಾಧಿಕಾರಿಗಳು, ಸುಳ್ಯ ತಾಲೂಕು ಸಂಘದ ವಿವಿಧ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರಿಗೆ ಸರಕಾರದಿಂದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ, ಸೇವಾ ಭದ್ರತೆ ಮತ್ತು ಇತರ ಇಲಾಖೆಗಳ ಕೆಲಸಗಳನ್ನು ಗ್ರಾಮ ಪಂಚಾಯತ್ ಗೆ ವಹಿಸಿ ಪಂಚಾಯತ್ ನೌಕರರಿಗೆ ತೀವ್ರ ಒತ್ತಡ ನೀಡುವುದರ ಕುರಿತು ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುವುದೆಂದು ನಿರ್ಣಯಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ಮತ್ತು ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್ ಪಡೆದಿರುವ ರಾಜ್ಯಾಧ್ಯಕ್ಷರಾದ ದೇವಿಪ್ರಸಾದ್ ಬೊಳ್ಮ ಇವರನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ಸುಳ್ಯ ತಾಲೂಕು ಸಂಘದ ಸದಸ್ಯರಾದ ಗಿರಿಧರ ಕಳಂಜ ಸ್ವಾಗತಿಸಿ, ಕಾರ್ಯದರ್ಶಿ ನೇತ್ರಾವತಿ ಮರ್ಕಂಜ ವಂದಿಸಿ, ಜಿಲ್ಲಾ ಕಾರ್ಯದರ್ಶಿ ರಜೀಶ್ ಉಬರಡ್ಕ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…