Advertisement
ಸುದ್ದಿಗಳು

ಸುಳ್ಯ ತಾಲೂಕು ಪಂಚಾಯತ್ : ಪ್ರಗತಿ ಪರಿಶೀಲನಾ ಸಭೆ

Share

ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ಪ್ರಗತಿ ಪರಿಶೀಲನಾ ಸಭೆ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಅಧಿಕಾರಿಗಳು ವಿವಿಧ ಇಲಾಖೆಗಳ ಮಾಹಿತಿ ನೀಡಿದರು.

ಕಲ್ಮಕಾರಿನಲ್ಲಿ ಪ್ರಕೃತಿವಿಕೋಪದಲ್ಲಿ ಮನೆಗೆ ಹಾನಿ ಸಂಭವಿಸಿದವರಿಗೆ ಮತ್ತು ಭೂ ಕುಸಿತದ ಅಪಾಯದ ಸ್ಥಳದ ಕುಟುಂಬಗಳಿಗೆ ಮನೆ ನಿರ್ಮಿಸಲು ಗ್ರಾಮದ ಪನ್ನೆ ಎಂಬಲ್ಲಿ ಸ್ಥಳ ಗುರುತಿಸಿ ಸರ್ವೆ ನಡೆಸಲಾಗಿದೆ. ಆದರೆ ಆ ಸ್ಥಳ ಡೀಮ್ಡ್ ಫಾರೆಸ್ಟ್ ಆಗಿರುವುದರಿಂದ ಗ್ರಾಮದ ಪದ್ನಡ್ಕ ಎಂಬಲ್ಲಿ ಬೇರೆ ಸ್ಥಳ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮರ್ಕಂಜ, ಮಡಪ್ಪಾಡಿ, ಜಾಲ್ಸೂರು ಸೇರಿ ವಿವಿಧ ಕಡೆಗಳಲ್ಲಿ ಆರು ಮನೆಗಳನ್ನು ಪ್ರಕೃತಿ ವಿಕೋಪದಲ್ಲಿ ಸೇರ್ಪಡೆ ಮಾಡಬೇಕೆಂದು ಈ ಹಿಂದಿನ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ ಅದರ ಪ್ರಗತಿ ಏನಾಗಿದೆ ಎಂದು ತಾ.ಪಂ.ಅಧ್ಯಕ್ಷರು ಪ್ರಶ್ನಿಸಿದರು. ಮರ್ಕಂಜದ್ದು ಸೇರ್ಪಡೆ ಆಗಿದೆ ಉಳಿದವು ಪರಿಶೀಲನೆಯಲ್ಲಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿ ತಿಳಿಸಿದರು. ರಸ್ತೆಯ ಬದಿಯಲ್ಲಿ ಕಟ್ಟಡ ನಿರ್ಮಿಸುವುದನ್ನು ಆರಂಭದಲ್ಲಿಯೇ ತಡೆಯಲು ಕ್ರಮ ಕೈಗೊಳ್ಳಬೇಕು. ನಿರ್ಮಾಣ ಆದ ಮೇಲೆ ಮತ್ತೆ ತೆರವು ಮಾಡುವುದು ಸಮಸ್ಯೆ ಸೃಷ್ಠಿಸುತ್ತದೆ. ಸಮಸ್ಯೆ ಸೃಷ್ಠಿಗೆ ಆಸ್ಪದ ನೀಡಬೇಡಿ ಎಂದು ಅಧ್ಯಕ್ಷರು ಜಿ.ಪಂ.ಇಂಜಿನಿಯರ್‍ಗಳಿಗೆ ಸೂಚನೆ ನೀಡಿದರು.

ಓವರ್ ಲೋಡ್ ಆಗುತ್ತದೆ ಎಂಬ ಕಾರಣ ಬಾಳಿಲ ಕ್ಷೇತ್ರದಲ್ಲಿ ಮೂರು ಕಡೆ ವಿದ್ಯುತ್ ಟಿಸಿ ಅಳವಡಿಸಲು ಕ್ರಿಯಾ ಯೋಜನೆ ತಯಾರಿಸಿ ಎರಡು ವರ್ಷ ಕಳೆದರೂ ಲೈನ್‍ನ ಟಿಸಿ ಅಳವಡಿಸಿಲ್ಲ. ತಾಲೂಕಿನಾದ್ಯಂತ ಈ ಸಮಸ್ಯೆ ಇದೆ ಈ ರೀತಿಯ ನಿರ್ಲಕ್ಷ್ಯ ಯಾಕೆ ಎಂದು ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಮೆಸ್ಕಾಂ ಇಂಜನಿಯರ್‍ನ್ನು ಪ್ರಶ್ನಿಸಿದರು. ಒಂದು ತಿಂಗಳಲ್ಲಿ ಟಿಸಿ ಅಳವಡಿಕೆಗೆ ಕ್ರಮ ಕೈಗೊಳ್ಳುವುದಾಗಿ ಮೆಸ್ಕಾಂ ಇಂಜಿನಿಯರ್ ಸಭೆಗೆ ತಿಳಿಸಿದರು. ಒಬ್ಬೊಬ್ಬರು ಇಂಜಿನಿಯರ್ ಒಂದೊಂದು ಸಭೆಗೆ ಬರುವ ಕಾರಣ ಮೆಸ್ಕಾಂನಿಂದ ಸಮರ್ಪಕವಾದ ಮಾಹಿತಿ ಸಭೆಗೆ ಸಿಗುತ್ತಿಲ್ಲ. ಸಭೆಗೆ ಬರುವಾಗ ಹಿಂದಿನ ಸಭೆಯ ಮಾಹಿತಿಯನ್ನು ಪಡೆದುಕೊಂಡು ಬನ್ನಿ ಎಂದು ಅಧ್ಯಕ್ಷ ಚನಿಯ ಕಲ್ತಡ್ಕ ಸೂಚಿಸಿದರು.

ಅರಂಬೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಮುಂದಿನ ಮಾರ್ಚ್ ವೇಳೆಗೆ ಪೂರ್ತಿಯಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ತಿಳಿಸಿದರು. ತಾಲೂಕಿನ 1258 ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಆಗಿದೆ ಎರಡನೇ ಹಂತದ ಸಮವಸ್ತ್ರ ಕೆಲವು ವಿಭಾಗಗಳಲ್ಲಿ ಬಿಡುಗಡೆ ಆಗಿದೆ ಉಳಿದಲ್ಲಿ ಕೂಡಲೇ ಬಿಡುಗಡೆ ಆಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದರು. ಜಲಾಮೃತ ಯೋಜನೆಯಲ್ಲಿ ಅರಂತೋಡು, ತೊಡಿಕಾನ, ಸಂಪಾಜೆ ಗ್ರಾಮಗಳು ಆಯ್ಕೆಯಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೃಷಿ, ಅರಣ್ಯ, ತೋಟಗಾರಿಕಾ ಇಲಾಖೆಯ ಉದ್ಯೋಗ ಖಾತರಿ ಯೋಜನೆಯಲ್ಲಿ ಇಲ್ಲಿ ಕೃಷಿ ಕಾರ್ಯಗಳು ನಡೆಯಲಿದೆ ಎಂದರು. ಕಟ್ಟಡ ಕಾರ್ಮಿಕರ ನೋಂದಾವಣೆ ನಡೆಯುತಿದೆ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿ ತಿಳಿಸಿದರು. ಅರಣ್ಯ ಇಲಾಖೆಯ ವತಿಯಿಂದ ನೆಡುತೋಪು ನಿರ್ಮಾಣ, ಸಸ್ಯಗಳ ಪೋಷಣೆ ಕಾರ್ಯ ನಡೆಯುತ್ತಿದೆ. ಮುಂದಿನ ವರ್ಷಕ್ಕೆ ಒಟ್ಟು 1.29 ಲಕ್ಷ ಗಿಡಗಳನ್ನು ಬೆಳೆಸಲಾಗುತಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಗಿಡ ನೆಡುವ ಸಂದರ್ಭದಲ್ಲಿ ರಸ್ತೆ ಮಾರ್ಜಿನ್ ಬಿಟ್ಟು ನೆಡಲು ಗಮನ ಹರಿಸಿ ಎಂದು ಅಧ್ಯಕ್ಷರು ಸೂಚಿಸಿದರು. ಅ.22ರಿಂದ ನ.6ರ ತನಕ ಜಾನುವಾರುಗಳಿಗೆ ಕಾಲು ಬಾಯಿ ರೋಗದ ಲಸಿಕೆ ಹಾಕುವ ಅಭಿಯಾನ ನಡೆಯುತಿದೆ. ತಾಲೂಕಿನಲ್ಲಿ 29 ಸಾವಿರ ಜಾನುವಾರುಗಳಿಗೆ ಲಸಿಕೆ ಹಾಕಲಾಗುವುದು. ಇದಕ್ಕಾಗಿ ನಾಲ್ಕು ತಂಡ ರಚಿಸಲಾಗಿದೆ ಎಂದು ಪಶು ಸಂಗೋಪನಾ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು.
ಎಲ್ಲಾ ಇಲಾಖೆಗಳೂ ತಮ್ಮ ಅನುದಾನವನ್ನು ಮುಂದಿನ ಫೆಬ್ರವರಿ ತಿಂಗಳ ಮುಂಚಿತವಾಗಿ ಮುಗಿಸಲು ಪ್ರಯತ್ನಿಸಿ ಎಂದು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಸೂಚಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

3 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

5 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

5 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

11 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

11 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

14 hours ago