ಸುದ್ದಿಗಳು

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಹಾಗು ಪ್ರೌಢ ಶಾಲಾ ಕ್ರೀಡಾಕೂಟ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಸುಳ್ಯ ಮತ್ತು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆಯುವ ಸುಳ್ಯ ತಾಲೂಕು ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಕ್ರೀಡಾಕೂಟ ಅ.16 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಆರಂಭಗೊಂಡಿತು. ಕ್ರೀಡಾ ಕೂಟವನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.

Advertisement
Advertisement

ಬಾಳಿಲ ಗ್ರಾ.ಪಂ. ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ. ಅಧ್ಯಕ್ಷತೆ ವಹಿಸಿದ್ದರು.ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಧ್ವಜಾರೋಹಣಗೈದರು. ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಎಸ್.ಎನ್. ಮನ್ಮಥ, ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ಬಾಳಿಲ ಗ್ರಾ.ಪಂ. ಸದಸ್ಯರಾದ ರಾಧಾಕೃಷ್ಣ ರಾವ್ ಯು, ಸರಸ್ವತಿ ಸಿ.ಹೆಚ್, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ, ರಾಷ್ಟ ಪ್ರಶಸ್ತಿ ಪುರಸ್ಕೃತ ಬಿ.ವಿ. ಶಗ್ರಿತ್ತಾಯ, ಶಾಲಾ ಸಂಚಾಲಕ ಎನ್. ವೆಂಕಟರಮಣ ಭಟ್, ಕ್ಷೇತ್ರ ಸಮನ್ವಯಾಧಿಕಾರಿ ವೀಣಾ ಎಂ.ಟಿ, ವಿದ್ಯಾಬೋಧಿನೀ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಶಿವರಾಮ ಶಾಸ್ತ್ರಿ ಎಂ.ಎಸ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಚ್ಚುತ ಮಲ್ಕಜೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಬಾಲಕೃಷ್ಣ ಪುತ್ಯ, ಜಿಲ್ಲಾ ಗ್ರೇಡ್ 1 ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಯೇನೆಕಲ್ಲು, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಸಂಪಾಜೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿ ತೇಜಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾತುಗಳೊಂದಿಗೆ ವಿದ್ಯಾರ್ಥಿನಿ ಕು. ಅನ್ವಿತಾ ಕ್ರೀಡಾ ಪ್ರತಿಜ್ಞೆ ನೆರವೇರಿಸಿದರು.

ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯ ವೈ ಬಿ.‌ಸುಬ್ಬಯ್ಯ ವಂದಿಸಿ ಸಹ ಶಿಕ್ಷಕ ಯಶೋಧರ ನಾರಾಲು ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟ ಅ.17ರಂದು ಸಮಾಪನಗೊಳ್ಳಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

3 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

3 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…

3 hours ago

ಅಮ್ಮನ ಪ್ರೀತಿಗೆ ಎಣೆಯುಂಟೇ?

ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…

3 hours ago

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

17 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

18 hours ago