ಸುಳ್ಯ: ಸುಳ್ಯ ತಾಲೂಕು ಮುಖ್ಯಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಎಂ ಮತ್ತು ಯು ಸು ಗೌ ಅವರನ್ನು ಕೆ ಆರ್ ಗಂಗಾಧರ ಸನ್ಮಾನಿಸಿ ನಿವೃತ್ತಿ ಆದವರು ಪ್ರವೃತ್ತಿಯನ್ನು ಇನ್ನೂ ಕೂಡಾ ಮುಂದುವರಿಸಬೇಕೆಂದು ಕರೆ ನೀಡಿದರು. ಶ್ರೀಕೃಷ್ಣ ಉಪಾಧ್ಯಾಯ ಮುಖ್ಯ ಭಾಷಣ ಮಾಡಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ , ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಕಾರ್ಯದರ್ಶಿ ಎಂ.ಎಸ್. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಚಿದಾನಂದ ಕೇನಾಜೆ ವಂದಿಸಿದರು. ಸನ್ಮಾನಿತರನ್ನು ಯಶವಂತ ರೈ ಹಾಗೂ ಉಮಾಕುಮಾರಿ ಬೆಳ್ಳಾರೆ ಪರಿಚಯಿಸಿದರು. ಆನಂದ್ ವೈ ಎ.ಕಾರ್ಯಕ್ರಮ ನಿರೂಪಿಸಿದರು.
ಬಳಿಕ ನಡೆದ ಮಹಾಸಭೆಯಲ್ಲಿ ನೂತನ ಪದನಿಮಿತ್ತ ಅಧ್ಯಕ್ಷರಾಗಿ ಸ ಪ ಪೂ ಕಾಲೇಜು ಪ್ರಾಂಶುಪಾಲ ಮೋಹನ್ ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ದುಗಲಡ್ಕ, ಉಪಾಧ್ಯಕ್ಷರಾಗಿ ಪ್ರಭಾಕರ ಕಿರಿಭಾಗ ಮತ್ತು ನಳಿನಿ ಗಾಂಧಿನಗರ, ಸಹಕಾರ್ಯದರ್ಶಿಯಾಗಿ ಅಮರನಾಥ್ ಇವರನ್ನು ಆಯ್ಕೆ ಮಾಡಲಾಯಿತು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…