ಸುಳ್ಯ: ಸುಳ್ಯ ತಾಲೂಕು ಮುಖ್ಯಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಎಂ ಮತ್ತು ಯು ಸು ಗೌ ಅವರನ್ನು ಕೆ ಆರ್ ಗಂಗಾಧರ ಸನ್ಮಾನಿಸಿ ನಿವೃತ್ತಿ ಆದವರು ಪ್ರವೃತ್ತಿಯನ್ನು ಇನ್ನೂ ಕೂಡಾ ಮುಂದುವರಿಸಬೇಕೆಂದು ಕರೆ ನೀಡಿದರು. ಶ್ರೀಕೃಷ್ಣ ಉಪಾಧ್ಯಾಯ ಮುಖ್ಯ ಭಾಷಣ ಮಾಡಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ , ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಕಾರ್ಯದರ್ಶಿ ಎಂ.ಎಸ್. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಚಿದಾನಂದ ಕೇನಾಜೆ ವಂದಿಸಿದರು. ಸನ್ಮಾನಿತರನ್ನು ಯಶವಂತ ರೈ ಹಾಗೂ ಉಮಾಕುಮಾರಿ ಬೆಳ್ಳಾರೆ ಪರಿಚಯಿಸಿದರು. ಆನಂದ್ ವೈ ಎ.ಕಾರ್ಯಕ್ರಮ ನಿರೂಪಿಸಿದರು.
ಬಳಿಕ ನಡೆದ ಮಹಾಸಭೆಯಲ್ಲಿ ನೂತನ ಪದನಿಮಿತ್ತ ಅಧ್ಯಕ್ಷರಾಗಿ ಸ ಪ ಪೂ ಕಾಲೇಜು ಪ್ರಾಂಶುಪಾಲ ಮೋಹನ್ ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ದುಗಲಡ್ಕ, ಉಪಾಧ್ಯಕ್ಷರಾಗಿ ಪ್ರಭಾಕರ ಕಿರಿಭಾಗ ಮತ್ತು ನಳಿನಿ ಗಾಂಧಿನಗರ, ಸಹಕಾರ್ಯದರ್ಶಿಯಾಗಿ ಅಮರನಾಥ್ ಇವರನ್ನು ಆಯ್ಕೆ ಮಾಡಲಾಯಿತು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…