ಸುಳ್ಯ: ಸುಳ್ಯ ತಾಲೂಕು ಮುಖ್ಯಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಎಂ ಮತ್ತು ಯು ಸು ಗೌ ಅವರನ್ನು ಕೆ ಆರ್ ಗಂಗಾಧರ ಸನ್ಮಾನಿಸಿ ನಿವೃತ್ತಿ ಆದವರು ಪ್ರವೃತ್ತಿಯನ್ನು ಇನ್ನೂ ಕೂಡಾ ಮುಂದುವರಿಸಬೇಕೆಂದು ಕರೆ ನೀಡಿದರು. ಶ್ರೀಕೃಷ್ಣ ಉಪಾಧ್ಯಾಯ ಮುಖ್ಯ ಭಾಷಣ ಮಾಡಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ , ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಕಾರ್ಯದರ್ಶಿ ಎಂ.ಎಸ್. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಚಿದಾನಂದ ಕೇನಾಜೆ ವಂದಿಸಿದರು. ಸನ್ಮಾನಿತರನ್ನು ಯಶವಂತ ರೈ ಹಾಗೂ ಉಮಾಕುಮಾರಿ ಬೆಳ್ಳಾರೆ ಪರಿಚಯಿಸಿದರು. ಆನಂದ್ ವೈ ಎ.ಕಾರ್ಯಕ್ರಮ ನಿರೂಪಿಸಿದರು.
ಬಳಿಕ ನಡೆದ ಮಹಾಸಭೆಯಲ್ಲಿ ನೂತನ ಪದನಿಮಿತ್ತ ಅಧ್ಯಕ್ಷರಾಗಿ ಸ ಪ ಪೂ ಕಾಲೇಜು ಪ್ರಾಂಶುಪಾಲ ಮೋಹನ್ ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ದುಗಲಡ್ಕ, ಉಪಾಧ್ಯಕ್ಷರಾಗಿ ಪ್ರಭಾಕರ ಕಿರಿಭಾಗ ಮತ್ತು ನಳಿನಿ ಗಾಂಧಿನಗರ, ಸಹಕಾರ್ಯದರ್ಶಿಯಾಗಿ ಅಮರನಾಥ್ ಇವರನ್ನು ಆಯ್ಕೆ ಮಾಡಲಾಯಿತು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…