ಸುಳ್ಯ: ಸುಳ್ಯ ತಾಲೂಕು ಮುಖ್ಯಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಎಂ ಮತ್ತು ಯು ಸು ಗೌ ಅವರನ್ನು ಕೆ ಆರ್ ಗಂಗಾಧರ ಸನ್ಮಾನಿಸಿ ನಿವೃತ್ತಿ ಆದವರು ಪ್ರವೃತ್ತಿಯನ್ನು ಇನ್ನೂ ಕೂಡಾ ಮುಂದುವರಿಸಬೇಕೆಂದು ಕರೆ ನೀಡಿದರು. ಶ್ರೀಕೃಷ್ಣ ಉಪಾಧ್ಯಾಯ ಮುಖ್ಯ ಭಾಷಣ ಮಾಡಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ , ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಕಾರ್ಯದರ್ಶಿ ಎಂ.ಎಸ್. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಚಿದಾನಂದ ಕೇನಾಜೆ ವಂದಿಸಿದರು. ಸನ್ಮಾನಿತರನ್ನು ಯಶವಂತ ರೈ ಹಾಗೂ ಉಮಾಕುಮಾರಿ ಬೆಳ್ಳಾರೆ ಪರಿಚಯಿಸಿದರು. ಆನಂದ್ ವೈ ಎ.ಕಾರ್ಯಕ್ರಮ ನಿರೂಪಿಸಿದರು.
ಬಳಿಕ ನಡೆದ ಮಹಾಸಭೆಯಲ್ಲಿ ನೂತನ ಪದನಿಮಿತ್ತ ಅಧ್ಯಕ್ಷರಾಗಿ ಸ ಪ ಪೂ ಕಾಲೇಜು ಪ್ರಾಂಶುಪಾಲ ಮೋಹನ್ ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ದುಗಲಡ್ಕ, ಉಪಾಧ್ಯಕ್ಷರಾಗಿ ಪ್ರಭಾಕರ ಕಿರಿಭಾಗ ಮತ್ತು ನಳಿನಿ ಗಾಂಧಿನಗರ, ಸಹಕಾರ್ಯದರ್ಶಿಯಾಗಿ ಅಮರನಾಥ್ ಇವರನ್ನು ಆಯ್ಕೆ ಮಾಡಲಾಯಿತು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…